ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಹಳೆ ಕೋಡಿಹಳ್ಳಿಯಲ್ಲಿ ಯುವಕನೊಬ್ಬ ಕ್ಷುಲ್ಲಕ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಮೃತ ಯುವಕನನ್ನು ಸಾಗರ್ (21) ಎಂದು ಗುರುತಿಸಲಾಗಿದೆ. ಈತನಿಗೆ ಮನೆಯಲ್ಲಿ ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಮನನೊಂದು ಯುವಕ ಫೆಬ್ರವರಿ 19ರಂದು ಜ್ಯೂಸ್ಗೆ ಇಲಿ ಪಾಷಾಣ ಬೆರಸಿಕೊಂಡು ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ. ವಿಷಯ ತಿಳಿದ ಕೂಡಲೇ ಯುವಕನ ಪೋಷಕರು ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾನೆ.