ಶಿವಮೊಗ್ಗ: ಈದ್ ಮಿಲಾದ್ ಹಬ್ಬ ಆಚರಣೆ ಕಮಿಟಿ ರಚನೆ ಸಂಬಂಧ ನಡೆಯುತ್ತಿದ್ದ ಸಭೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿದೆ. ಈ ಸಂದರ್ಭ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.
ಜಾಫರ್ (32) ಎಂಬಾತನ ಕೊಲೆಯಾಗಿದೆ. ಕಮಿಟಿ ವಿಚಾರವಾಗಿ ಶಿಕಾರಿಪುರದ ಕೆಹೆಚ್ಪಿ ಕಾಲೋನಿಯಲ್ಲಿ ಮುಸ್ಲಿಂ ಸಮುದಾಯದ ಸಭೆ ನಡೆಯುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಕ್ಷುಲಕ ವಿಚಾರಕ್ಕೆ ಗಲಾಟೆಯಾಗಿದ್ದು ಜಾಫರ್ ಎದೆಗೆ ಚಾಕು ಹಾಕಲಾಗಿದೆ. ತೀವ್ರ ರಕ್ತಸ್ರಾವದಿಂದ ಜಾಫರ್ ಮೃತಪಟ್ಟಿದ್ದಾರೆ. ಶಿಕಾರಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.