ಮದ್ದೂರು: ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಸುಮಾರು 2 ಎಕರೆಯಲ್ಲಿ ಬೆಳೆದಿದ್ದ ಬಾಳೆ ನಾಶವಾದ ಘಟನೆ ಮಂಡ್ಯದ ಮದ್ದೂರು ತಾಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವಿನಯ್ ಎಂಬುವರಿಗೆ ಸೇರಿದ 2 ಎಕರೆ ಬಾಳೆ ಬೆಳೆ ನಾಶವಾಗಿದೆ. ಘಟನೆಯಿಂದ 2 ಲಕ್ಷ ರೂ.ಗೂ ಅಧಿಕ ಬಾಳೆ ನಾಶವಾಗಿದ್ದು ಪರಿಹಾರಕ್ಕೆ ಒತ್ತಾಯಿಸಿದ್ದಾರೆ.
ಕಳೆದ 15 ದಿನಗಳ ಹಿಂದೆ ಇದೇ ರೀತಿ ಬಿರುಗಾಳಿಗೆ ಸುಮಾರು 50 ಬಾಳೆ ಗಿಡಗಳು ಹುರುಳಿ ಒಂದು ಲಕ್ಷ ನಷ್ಟವಾಗಿತ್ತು.ಇದೀಗ ಬಾಳೆ ಬೆಳೆ ಕಳೆದುಕೊಂಡ ರೈತ ಕಂಗಾಲಾಗಿದ್ದಾರೆ.

