ಮಂಗಳೂರು : ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ದೆಹಲಿ ಪೊಲೀಸರು ಬಂಧಿಸಿದ ಹಿನ್ನಲೆ ಕಾಂಗ್ರೆಸ್ ನಿಂದ ಮಂಗಳೂರು ಎಂಜಿ ರಸ್ತೆ ಲಾಲ್ಬಾಗ್ ಗಾಂಧಿ ಪ್ರತಿಮೆ ಎದುರು ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ರವರ ಸೂಚನೆಯ ಮೇರೆಗೆ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ಬಳಿಕ ಪಿವಿಎಸ್ ಬಿಜೆಪಿ ಕಚೇರಿ ಚಲೋ ಯತ್ನ ನಡೆಯಿತು. ಪ್ರತಿಭಟನಾ ನಿರತರನ್ನ ತಡೆದು ಪೊಲೀಸರು ಬಂಧಿಸಿದ್ದಾರೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಸರಕಾರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

