ಮಂಗಳೂರು : ಆರ್ಎಸ್ಎಸ್ ನೋಂದಣಿ ವಿಚಾರವನ್ನು ಮುಂದಿಟ್ಟುಕೊಂಡು, ಸರ್ಕಾರಿ ನೌಕರರು ಹಾಗೂ ಇತರರಿಗೆ ಬೆಂಬಲವಾಗಿ ‘ನಾನೂ ಗಣಪತಿ’ ಎಂಬ ಚಳವಳಿ ಆರಂಭಿಸುವ ಆಲೋಚನೆ ಹೊಂದಿರುವುದಾಗಿ ಅನುಪಮಾ ಶೆಣೈ ತಿಳಿಸಿದರು. ಈ ಕುರಿತು ಜನರು, ನಿವೃತ್ತ ಸರ್ಕಾರಿ ನೌಕರರು, ಪೊಲೀಸರು ಹಾಗೂ ಯೋಧರು ಸಲಹೆ-ಸಹಕಾರ ನೀಡುವಂತೆ ಮನವಿ ಮಾಡಿದರು.
ಪ್ರಿಯಾಂಕ್ ಖರ್ಗೆ ಅವರು ಆರ್ಎಸ್ಎಸ್ನ ರಾಷ್ಟ್ರೀಯ ಸರಸಂಘಚಾಲಕರಾಗಬೇಕು ಎಂಬ ವ್ಯಂಗ್ಯಾತ್ಮಕ ಸಲಹೆಯನ್ನೂ ನೀಡಿದ ಅವರು, ಆರ್ಎಸ್ಎಸ್ ನೋಂದಣಿ ಹಾಗೂ ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ಮುಂದಿನ ದಿನಗಳಲ್ಲಿ ಚರ್ಚೆ ನಡೆಸುವುದಾಗಿ ತಿಳಿಸಿದರು.

