ಮಂಗಳೂರು: ಆಹಾರ ಸುರಕ್ಷತಾ ಇಲಾಖೆಯಿಂದ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ರೈಲಿನ ಆಹಾರ ಪೂರೈಕೆ ಮತ್ತು ಕ್ಯಾಟರಿಂಗ್ ವ್ಯವಸ್ಥೆಯ ಪರಿಶೀಲನೆ ನಡೆಸಲಾಯಿತು.
ಕರ್ನಾಟಕ ಆಹಾರ ಸುರಕ್ಷತಾ ಇಲಾಖೆಯು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಸೇರಿದಂತೆ ರಾಜ್ಯದ ಪ್ರಮುಖ ನಿಲ್ದಾಣಗಳಲ್ಲಿ ವಂದೇ ಭಾರತ್ ರೈಲುಗಳ ಆಹಾರ ಪೂರೈಕೆ ಹಾಗೂ ಕ್ಯಾಟರಿಂಗ್ ವ್ಯವಸ್ಥೆಯ ಮೇಲೆ ವಿಶೇಷ ತಪಾಸಣೆ ನಡೆಸಿದೆ.
ಈ ಪರಿಶೀಲನೆಯಲ್ಲಿ ರೈಲಿನಲ್ಲಿ ನೀಡಲಾಗುವ ಆಹಾರದ ಶುಚಿತ್ವ, ಗುಣಮಟ್ಟ ಮತ್ತು ಪ್ಯಾಕಿಂಗ್ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಲಾಗಿದೆ.

