Bengaluru 27°C
Ad

ಏರ್ಪೋರ್ಟ್ ಆಡಳಿತದಿಂದ ನಿರ್ಲಕ್ಷ್ಯ : ನಿಲ್ದಾಣ ಮುಖ್ಯದ್ವಾರದಲ್ಲಿ ಸ್ಥಳೀಯರ ಪ್ರತಿಭಟನೆ

ಮಂಗಳೂರು ವಿಮಾನ ನಿಲ್ದಾಣದ ರನ್​​ವೇಯಿಂದ ಹರಿದುಹೋಗುವ ನೀರು ಕೆಂಜಾರು ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ನೆರೆ ಸೃಷ್ಟಿಸುತ್ತಿದ್ದು, ಕೆಲವು ಮನೆಗಳಿಗೂ ನೀರು ನುಗ್ಗಿದೆ. ಇದು ಸ್ಥಳೀಯರ ಅಕ್ರೋಶಕ್ಕೆ ಕಾರಣವಾಗಿದೆ.

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದ ರನ್​​ವೇಯಿಂದ ಹರಿದುಹೋಗುವ ನೀರು ಕೆಂಜಾರು ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ನೆರೆ ಸೃಷ್ಟಿಸುತ್ತಿದ್ದು, ಕೆಲವು ಮನೆಗಳಿಗೂ ನೀರು ನುಗ್ಗಿದೆ. ಇದು ಸ್ಥಳೀಯರ ಅಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಸಂಕಷ್ಟಕ್ಕೀಡಾಗಿರುವ ಸ್ಥಳೀಯರು ಏರ್​​ಪೋರ್ಟ್ ಆಡಳಿತದ ವಿರುದ್ಧ ಸೋಮವಾರ ಭಾರಿ ಪ್ರತಿಭಟನೆ ನಡೆಸಿದರು. ಮಂಗಳೂರು ವಿಮಾನ ನಿಲ್ದಾಣ ಮುಖ್ಯದ್ವಾರ ಬಂದ್ ಮಾಡಿದ ಸ್ಥಳೀಯರು, ಯಾವುದೇ ವಾಹನ ತೆರಳದಂತೆ ತಡೆಯೊಡ್ಡಿದರು.

Ad
300x250 2

ವಿಮಾನ ನಿಲ್ದಾಣದಿಂದ ಮಳೆ ನೀರು ಹರಿದು ಹೋಗಲು ಏರ್ಪೋರ್ಟ್ ಆಡಳಿತ ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ. ಹಿಗಾಗಿ ಕೆಂಜಾರು ಹಾಗೂ ಏರ್ಪೋರ್ಟ್ ಸುತ್ತಮುತ್ತಲಿನ ಹಲವು ಮನೆಗಳಿಗೆ ನೆರೆ ಭೀತಿ ಸೃಷ್ಟಿಯಾಗಿದೆ. ಸೂಕ್ತ ವ್ಯವಸ್ಥೆ ಕಲ್ಪಿಸದೆ ಮಳೆ ನೀರನ್ನು ಅವೈಜ್ಞಾನಿಕವಾಗಿ ಹೊರ ಬಿಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Ad
Ad
Nk Channel Final 21 09 2023
Ad