ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕಾದ್ಯಂತ ದಾಳಿ ಮಾಡಿದ್ದಾರೆ. 12 ಜನ ಅಧಿಕಾರಿಗಳಿಗೆ ಸೇರಿದ 55 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ತಪಾಸಣೆ ನಡೆಸಿದ್ದಾರೆ.

ಅದರಂತೆ ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತ ಕೆ ಎ ಎಸ್ ಗ್ರೇಡ್ ಅಧಿಕಾರಿ ಆನಂದ್ ಅವರ ಕಮಿಷನರ್ ಕಚೇರಿ ಹಾಗೂ ನಿವಾಸದ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.

ಬೆಂಗಳೂರು ನಗರದ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.