Bengaluru 22°C
Ad

ಜಿಲ್ಲೆಯ ಜನ ಬಿಜೆಪಿಯ ಕೈ ಹಿಡಿದಿದ್ದಾರೆ : ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ

ದ.ಕ‌ ಲೋಕಸಭಾ ಕ್ಷೇತ್ರದಲ್ಲಿ‌ ಬಿಜೆಪಿ ಜಯಭೇರಿ ಬಳಿಕ ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ ಹಂಚಿಕೊಂಡಿದ್ದಾರೆ.

ಮಂಗಳೂರು: ದ.ಕ‌ ಲೋಕಸಭಾ ಕ್ಷೇತ್ರದಲ್ಲಿ‌ ಬಿಜೆಪಿ ಜಯಭೇರಿ ಬಳಿಕ ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ ಹಂಚಿಕೊಂಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಜನ ಬಿಜೆಪಿಯ ಕೈ ಹಿಡಿದಿದ್ದಾರೆ. ಕ್ಯಾ.ಬ್ರಿಜೇಶ್ ಚೌಟ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ವರ್ಷಗಳಲ್ಲಿ ಅವರಿಗೆ ಅಭಿವೃದ್ಧಿ ಮಾಡುವ ಅವಕಾಶ ಇದೆ. ಸಂಪೂರ್ಣವಾಗಿ ಅಭಿವೃದ್ಧಿ ಮಾಡುವ ವಿಶ್ವಾಸ ಇದೆ. ಕೋಟಾ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದಲ್ಲಿ ಹದಿನೇಳು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ.

Ad
300x250 2

ರಾಜ್ಯದಲ್ಲಿ ಬಿಜೆಪಿ ಮುನ್ನಡೆಯ ಹಾದಿಯಲ್ಲಿದೆ. ಕಳೆದ ಬಾರಿಗಿಂತ ಕಡಿಮೆ ಅಂತರದ ಗೆಲುವು ಹಿನ್ನಲೆ. ಸಹಜವಾಗಿ ಚುನಾವಣೆಯಲ್ಲಿ ವ್ಯತ್ಯಾಸಗಳಾಗುತ್ತದೆ. ಈ ಬಾರಿ ಕಾಂಗ್ರೆಸ್ ಗ್ಯಾರಂಟಿ, ಆಶ್ವಾಸನೆಗಳನ್ನು ನೀಡಿದೆ. ಆದರೂ ಬಿಜೆಪಿ ಒಂದೂವರೆ ಲಕ್ಷ ಮತಗಳ ಅಂತರದ ಜಯ ಪಡೆದಿದೆ. ನಾನು ಕೇರಳದ ಸಹ ಪ್ರಭಾರಿಯಾಗಿ ಕೆಲಸ ಮಾಡಿದ್ದೆ. ಬಿಜೆಪಿ ಕೇರಳದಲ್ಲಿ ತನ್ನ ಅಕೌಂಟ್ ತೆರೆದಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.

Ad
Ad
Nk Channel Final 21 09 2023
Ad