Bengaluru 27°C
Ad

ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಎನ್. ಜಿ. ಪಟವರ್ಧನ್ ನಿಧನ

ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರು ಆಗಿದ್ದ ಸದಾ ಹಸನ್ಮುಖಿ, ಲೇಖಕರು ಆಗಿದ್ದ ಶ್ರಿಯುತ ಎನ್. ಜಿ. ಪಟವರ್ಧನ್ ಇವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಸಂಜೆ 7.45 ಕ್ಕೆ ಇಹ ಲೋಕ ತ್ಯಜಿಸಿದ್ದಾರೆ.

ಉಜಿರೆ : ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರು ಆಗಿದ್ದ ಸದಾ ಹಸನ್ಮುಖಿ, ಲೇಖಕರು ಆಗಿದ್ದ ಶ್ರಿಯುತ ಎನ್. ಜಿ. ಪಟವರ್ಧನ್ ಇವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಸಂಜೆ 7.45 ಕ್ಕೆ ಇಹ ಲೋಕ ತ್ಯಜಿಸಿದ್ದಾರೆ.

Ad
300x250 2

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ೩೩ ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಎನ್.ಜಿ ಪಟವರ್ಧನ್ ಅವರು ಆನೇಕ ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ತಾಲೂಕಿನ ಪ್ರಖ್ಯಾತ ಸಾಹಿತಿಗಳಲ್ಲಿ ಓರ್ವರಾಗಿದ್ದ ಅವರ ಆನೇಕ ಕವನ, ಹನಿಗವನ, ಕಥೆ, ಕಾದಂಬರಿ ಕೃತಿಗಳು ಪುಸ್ತಕ ರೂಪದಲ್ಲಿ ಪ್ರಕಟವಾಗಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷತೆಯನ್ನು ವಹಿಸಿ ಯಶಸ್ವಿಯಾಗಿ ನಿರ್ವಹಿಸಿದ್ದರು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿರುವ ಎನ್.ಜಿ ಪಟವರ್ಧನ್ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ.

 

Ad
Ad
Nk Channel Final 21 09 2023
Ad