ಮಂಗಳೂರು: ಭಾರೀ ಮಳೆಗೆ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಬಲಿಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಓಡಿನ್ಮಾಳ ಗ್ರಾಮದ ಕುಮ್ಮಂಜ ಎಂಬಲ್ಲಿ ನಡೆದಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದನೇ ಬಲಿಯಾಗಿದೆ.
ವಿಜೇಶ್ ಜೈನ್ (27) ಮೃತ ಸಹಾಯಕ ಪವರ್ ಮ್ಯಾನ್. ಕೆಂಜಿಲ ಮನೆ ನಿವಾಸಿ ಸುಕುಮಾರ್ ಜೈನ್ ಮತ್ತು ಪೂರ್ಣಿಮಾ ದಂಪತಿಯ ಎರಡನೇ ಮಗ. HT ಲೈನ್ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

