ಮಂಗಳೂರು: ಲಾಲ್ಬಾಗ್ನಿಂದ ಮಂಗಳಾದೇವಿ ಕಡೆಗೆ ತೆರಳುತ್ತಿದ್ದ ಖಾಸಗಿ ಸಿಟಿ ಬಸ್ಸನ್ನು ಬುಧವಾರ ಬಿಜೈ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಸಾರ್ವಜನಿಕರು ತಡೆದ ಘಟನೆ ನಡೆದಿದೆ. ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯ ಆರೋಪ ಚಾಲಕನ ಮೇಲೆ ಕೇಳಿಬಂದಿದೆ.
ಜಂಕ್ಷನ್ನಲ್ಲಿ ಕಾಯುತ್ತಿದ್ದ ಬೈಕ್ ಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಕೂಡಲೇ ಪ್ರತಿಕ್ರಿಯಿಸಿದ ಸಾರ್ವಜನಿಕರು ವಾಹನವನ್ನು ತಡೆದು ಸಂಚಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಸ್ ಅನ್ನು ವಶಪಡಿಸಿಕೊಂಡಿದ್ದಾರೆ.

