Bengaluru 16°C

ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಾಂಬ್ ಇಟ್ಟಿದ್ದಾಗಿ ಬೆದರಿಕೆ!

ವಿಮಾನ ನಿಲ್ದಾಣದಲ್ಲಿ ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಾಂಬ್ ಇಟ್ಟಿದ್ದಾಗಿ ಬೆದರಿಕೆ ಒಡ್ಡಲಾಗಿದೆ. ನ.30ರಂದು ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಅಕ್ರಮ್ ವಾಯ್ಕರ್ ಎನ್ನುವ ಹೆಸರಲ್ಲಿದ್ದ ಇಮೇಲ್ ನಿಂದ ಬೆದರಿಕೆ ಸಂದೇಶ ಬಂದಿದೆ.

ಮಂಗಳೂರು : ವಿಮಾನ ನಿಲ್ದಾಣದಲ್ಲಿ ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಾಂಬ್ ಇಟ್ಟಿದ್ದಾಗಿ ಬೆದರಿಕೆ ಒಡ್ಡಲಾಗಿದೆ. ನ.30ರಂದು ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಅಕ್ರಮ್ ವಾಯ್ಕರ್ ಎನ್ನುವ ಹೆಸರಲ್ಲಿದ್ದ ಇಮೇಲ್ ನಿಂದ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ಬಜೆ ಠಾಣೆಗೆ ಸಿಐಎಸ್‌ಎಫ್ ಸಿಬ್ಬಂದಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.


ತಮಿಳುನಾಡಿನಲ್ಲಿ ಬಂಧನಕ್ಕೀಡಾಗಿರುವ ಡ್ರಗ್ ಕಿಂಗ್ ಪಿನ್ ಎನ್ನಲಾದ ಜಾಫರ್ ಸಾದಿಕ್ ಮತ್ತು ಡಿಸಿಎಂ ಉದಯನಿಧಿ ಸ್ಟಾಲಿನ್ ಅವರ ಪತ್ನಿ ಚಿತ್ರ ನಿರ್ಮಾಪಕಿ ಕೃತಿಗಾ ಉದಯನಿಧಿ ಅವರ ಮೇಲಿರುವ ಕೇಸನ್ನು ವಾಪಸ್ ಪಡೆಯಬೇಕು. ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿರುವ ಟಿಎನ್ ಎಲ್ ಎ ಉಗ್ರ ಸಂಘಟನೆಯ ಮುಖ್ಯಸ್ಥ ಎಸ್. ಮಾರನ್ ಅವರನ್ನು ಬಿಡುಗಡೆ ಮಾಡಬೇಕು ಎಂಬುದಾಗಿ ಬೇಡಿಕೆ ಮುಂದಿಡಲಾಗಿದೆ.


ರಾಮೇಶ್ವರ ಕೆಫೆ ಬ್ಲಾಸ್ಟ್ ಅನ್ನು ಪಾಕ್ ಐಎಸ್‌ಐ ನವರು ತಮಿಳುನಾಡು ಡಿಜಿಪಿಯ ಪುತ್ರಿ ದೌಡಿ ಜೀವಾಲ್ ಎಂಬವರನ್ನು ಬಳಸಿಕೊಂಡು ಮಾಡಿದ್ದಾರೆ. ಜಮೇಶಾ ಮುಬೀನ್ ಎಂಬಾತ ಇದಕ್ಕೆ ಸಹಕಾರ ನೀಡಿದ್ದಾನೆ ಎಂದು ಇಮೇಲ್ ಸಂದೇಶದಲ್ಲಿ ಬರೆದಿರುವುದಲ್ಲದೆ, ವಿ.ಬಾಲಕೃಷ್ಣನ್ ಐಪಿಎಸ್, ಎಡ್ವಕೇಟ್ ಶ್ವೇತಾ, ವರುಣ್ ಐಪಿಎಸ್ ಎಂಬ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಇದಲ್ಲದೆ, ರಾಮೇಶ್ವರ ಕೆಫೆ ಪ್ರಕರಣವನ್ನು ಐಎಸ್‌ಐನವರು ಮಾತ್ರ ಮಾಡಿದ್ದಾಗಿ ಬಿಂಬಿಸಲಾಗಿದೆ.. ಹೀಗೆ ಹಲವು ವಿಚಾರಗಳನ್ನು ಅರೆಬರೆ ಇಂಗ್ಲಿಷ್ ನಲ್ಲಿರುವ ಬೆದರಿಕೆ ಸಂದೇಶದಲ್ಲಿ ಬರೆಯಲಾಗಿದೆ.


ಇದೇ ರೀತಿಯ ಬೆದರಿಕೆ ಸಂದೇಶ ಕಳೆದ ಅಕ್ಟೋಬರ್ 25ರಂದು ತಿರುಪತಿಯ ಎರಡು ಹೆಸರಾಂತ ಹೊಟೇಲ್ ಗಳಿಗೆ ಬಂದಿತ್ತು. ಅದರಲ್ಲಿಯೂ ಜಾಫ‌ರ್ ಸಾದಿಕ್ ಮತ್ತು ಕೃತಿಕಾ ಉದಯನಿಧಿ ಹೆಸರು ಉಲ್ಲೇಖ ಆಗಿತ್ತು. ಮಂಗಳೂರು ಏರ್ಪೋಟಿ್ರಗೆ ಬಂದಿರುವ ಬೆದರಿಕೆ ಸಂದೇಶದಲ್ಲಿ ತಮಿಳುನಾಡಿನ ವಿಚಾರ ಇರುವುದರಿಂದ ಈ ಕೃತ್ಯದಲ್ಲಿ ಅಲ್ಲಿನವರೇ ಇರುವ ಸಾಧ್ಯತೆಯಿದೆ.


Nk Channel Final 21 09 2023