ಕೊಡಗು: ಮದುವೆಯಲ್ಲಿ ಊಟ ಮಾಡಿ ನೂರಾರು ಜನರು ಅಸ್ವಸ್ಥಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ.
ಘಟನೆಯಿಂದ ಸುಮಾರು 150 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ಮಧ್ಯಾಹ್ನ ನಡೆದ ಮದುವೆಯಲ್ಲಿ ಊಟ ಜನರು ಸೇವಿಸಿದ್ದು, ಬಳಿಕ ಸಂಜೆಯ ವೇಳೆಗೆ ಹಲವರಲ್ಲಿ ವಾಂತಿ ಕಾಣಿಸಿಕೊಂಡಿದೆ.
ಅಸ್ವಸ್ಥಗೊಂಡ ಜನರು ಕೊಡಗಿನ ಕುಶಾಲನಗರ ಆಸ್ಪತ್ರೆಗೆ ಭೇಟಿ ನೀಡಿದ್ದು, ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರು ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊಡಗು ಆರೋಗ್ಯಾಧಿಕಾರಿ ಕುಶಾಲನಗರ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೂ ಹೊಗಿದ್ದಾರೆ. ಆಸ್ಪತ್ರೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಭೇಟಿ ನೀಡಿ ಜನರ ಆರೋಗ್ಯ ವಿಚಾರಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.