News Karnataka Kannada
Sunday, May 05 2024
ಮೈಸೂರು

ಅಧಿಕಾರಿಗಳ ಫ್ಯಾನ್ಸ್ ಪೇಜ್ ನಿಷೇಧಕ್ಕೆ ಪ್ರತಾಪಸಿಂಹ ಆಗ್ರಹ

Pratap Mysore 28 6 21
Photo Credit :

ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ಐಎಎಸ್-ಐಪಿಎಸ್ ಅಧಿಕಾರಿಗಳ ಫ್ಯಾನ್ಸ್ ಪೇಜ್ ನಿಷೇಧಕ್ಕೆ ಮೈಸೂರು ಸಂಸದ ಪ್ರತಾಪಸಿಂಹ​ ಒತ್ತಾಯಿಸಿದ್ದಾರೆ.

ಸಂಸದ ಪ್ರತಾಪಸಿಂಹ ಮೈಸೂರಿನ ಹಿಂದಿನ ಜಿಲ್ಲಾಧಿಕಾರಿ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ವಾಕ್ ಸಮರವನ್ನು ಮತ್ತೊಂದು ಮಜಲಿಗೆ ತೆಗೆದುಕೊಂಡು ಹೋಗಿದ್ದಾರೆ.

ಈ ಸಂಬಂಧ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿಗೆ ಪ್ರತಾಪ್ ಸಿಂಹ ಮನವಿ ಮಾಡಿಕೊಂಡಿದ್ದು, ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಏನೂ ಕೆಲಸ ಮಾಡದಿದ್ದರೂ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಬಿಂಬಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು. ಬೇಕಿದ್ದರೆ ಅಧಿಕಾರಿಗಳು ಮಾಡಿದ ಕೆಲಸಗಳನ್ನ ಜಿಲ್ಲೆಯ ಖಾತೆಯಿಂದ ಒಂದು ಅಕೌಂಟ್ ತೆರೆದು ಅದರಲ್ಲಿ ಮಾಹಿತಿ ಹಾಕಲಿ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಪರ ಸಾಮಾಜಿಕ ಜಾಲತಾಣದ ಫ್ಯಾನ್ಸ್ ಫೇಜ್ ಗಳಿಂದ ಹೊಗಳಿಕೆಗಳು ಸೃಷ್ಟಿಯಾಗುತ್ತಿವೆ. ಯಾರೋ ಒಬ್ಬ ಲಾಠಿ ಹಿಡಿದು ಓಡಾಡಿದ್ರೆ ಹಾಗೆ-ಹೀಗೆ ಅಂತೆಲ್ಲಾ ಬಿಂಬಿಸಲಾಗ್ತಿದೆ. ಐಎಎಸ್, ಐಪಿಎಸ್ ಅಧಿಕಾರಿಗಳು ಉತ್ತಮ ಕೆಲಸಗಳನ್ನ ಮಾಡಬೇಕು ಎಂದು ಸಂಸದ ಪ್ರತಾಪಸಿಂಹ​ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು