News Karnataka Kannada
Wednesday, May 01 2024
ಮೈಸೂರು

ಅಸ್ವಸ್ಥಗೊಂಡವರು ಗುಣಮುಖರಾಗಲು ಮೃತ್ಯುಂಜಯ ಹೋಮ

Photo Credit :

ಅಸ್ವಸ್ಥಗೊಂಡವರು ಗುಣಮುಖರಾಗಲು ಮೃತ್ಯುಂಜಯ ಹೋಮ

ಚಾಮರಾಜನಗರ: ಸುಲ್ವಾಡಿ ಗ್ರಾಮದಲ್ಲಿರುವ ಕಿಚ್ಚು ಗುತ್ತಿ ಮಾರಮ್ಮನ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ ಈಗಾಗಲೇ ೧೩ ಮಂದಿ ಮೃತಪಟ್ಟು ನೂರಕ್ಕೂ ಹೆಚ್ಚುಮಂದಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಈ ಹೃದಯ ವಿದ್ರಾವಕ ಘಟನೆಯಿಂದ ಇಡೀ ಚಾಮರಾಜನಗರ ಜಿಲ್ಲೆಯೇ ದುಃಖದ ಮಡುವಿನಲ್ಲಿ ಮುಳುಗಿದೆ.

ಕುಟುಂಬಕ್ಕೆ ಆಧಾರವಾಗಿದ್ದವರನ್ನು, ಭವಿಷ್ಯದಲ್ಲಿ ಬದುಕಿ ಬಾಳಬೇಕಾಗಿದ್ದ ಮಕ್ಕಳನ್ನು, ಗಂಡ, ಹೆಂಡತಿ, ಹೀಗೆ ಒಬ್ಬರನೊಬ್ಬರನ್ನು ಕಳೆದುಕೊಂಡು ಊರಿಗೆ ಊರೇ ಸ್ಮಶಾನವಾಗಿದ್ದು ಜಿಲ್ಲೆಗೆ ಬಂದೊದಗಿರುವ ಸಂಕಷ್ಟ ನಿವಾರಿಸುವಂತೆ ಮತ್ತು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿರುವವರು ಆರೋಗ್ಯ ಸುಧಾರಿಸುವಂತೆ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ದೇವಾಂಗ ಪೇಟೆಯಲ್ಲಿರುವ ಶ್ರೀ ಮಳಿಗೆ ಮಾರಿಯಮ್ಮ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮವನ್ನು ನಡೆಸಲಾಯಿತು.

ತಿ.ನರಸೀಪುರ ಕ್ಷೇತ್ರದ ಮಾಜಿ ಶಾಸಕರಾದ ಬಿಜೆಪಿ ಮುಖಂಡ ಭಾರತಿಶಂಕರ್ ರವರು ಈ ಮೃತ್ಯುಂಜಯ ಹೋಮದಲ್ಲಿ ಭಾಗಿಯಾಗಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು