ಚಾಮರಾಜನಗರ: ಸುಲ್ವಾಡಿ ಗ್ರಾಮದಲ್ಲಿರುವ ಕಿಚ್ಚು ಗುತ್ತಿ ಮಾರಮ್ಮನ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ ಈಗಾಗಲೇ ೧೩ ಮಂದಿ ಮೃತಪಟ್ಟು ನೂರಕ್ಕೂ ಹೆಚ್ಚುಮಂದಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಈ ಹೃದಯ ವಿದ್ರಾವಕ ಘಟನೆಯಿಂದ ಇಡೀ ಚಾಮರಾಜನಗರ ಜಿಲ್ಲೆಯೇ ದುಃಖದ ಮಡುವಿನಲ್ಲಿ ಮುಳುಗಿದೆ.
ಕುಟುಂಬಕ್ಕೆ ಆಧಾರವಾಗಿದ್ದವರನ್ನು, ಭವಿಷ್ಯದಲ್ಲಿ ಬದುಕಿ ಬಾಳಬೇಕಾಗಿದ್ದ ಮಕ್ಕಳನ್ನು, ಗಂಡ, ಹೆಂಡತಿ, ಹೀಗೆ ಒಬ್ಬರನೊಬ್ಬರನ್ನು ಕಳೆದುಕೊಂಡು ಊರಿಗೆ ಊರೇ ಸ್ಮಶಾನವಾಗಿದ್ದು ಜಿಲ್ಲೆಗೆ ಬಂದೊದಗಿರುವ ಸಂಕಷ್ಟ ನಿವಾರಿಸುವಂತೆ ಮತ್ತು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿರುವವರು ಆರೋಗ್ಯ ಸುಧಾರಿಸುವಂತೆ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ದೇವಾಂಗ ಪೇಟೆಯಲ್ಲಿರುವ ಶ್ರೀ ಮಳಿಗೆ ಮಾರಿಯಮ್ಮ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮವನ್ನು ನಡೆಸಲಾಯಿತು.
ತಿ.ನರಸೀಪುರ ಕ್ಷೇತ್ರದ ಮಾಜಿ ಶಾಸಕರಾದ ಬಿಜೆಪಿ ಮುಖಂಡ ಭಾರತಿಶಂಕರ್ ರವರು ಈ ಮೃತ್ಯುಂಜಯ ಹೋಮದಲ್ಲಿ ಭಾಗಿಯಾಗಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು