ಮೈಸೂರು: ಮೈಸೂರು ಜಿಲ್ಲೆ ಕೆ.ಆರ್ ನಗರದ ಚುಂಚನಕಟ್ಟೆಯ ಆದಿಚುಂಚನಗಿರಿ ಶಾಖಾ ಮಠದ ಶಿವಾನಂದ ಸ್ವಾಮೀಜಿ ಕೊರೋನಾಗೆ ಬಲಿಯಾಗಿದ್ದಾರೆ.
ಎರಡು ದಿನದ ಹಿಂದೆ ಕೊರೋನಾ ಸೋಂಕು ತಗುಲಿದ್ದು, ಚಿಕಿತ್ಸೆ ಫಲಿಸದೆ ಇಂದು ಶಿವಾನಂದ ಸ್ವಾಮೀಜಿ (62) ಮೃತಪಟ್ಟಿದ್ದಾರೆ.
ಕಳೆದ ಎರಡು ದಿನದ ಹಿಂದೆ ಸ್ವಾಮೀಜಿಯನ್ನು ಮಂಡ್ಯ ಜಿಲ್ಲೆಯ ನಾಗಮಂಗಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಂಕು ಉಲ್ಬಣಗೊಂಡು ಸ್ವಾಮೀಜಿ ನಿಧನರಾಗಿದ್ದಾರೆ.