ಮೈಸೂರಿನಲ್ಲಿಂದು ಮಾತನಾಡಿದ ಅವರು, ಆರ್ಎಸ್ಎಸ್ ಅಂದ್ರೆ ತ್ಯಾಗ, ಬಲಿದಾನ, ಸೇವೆ, ಸರಳತೆಯ ಸಂಕೇತ. ಇದನ್ನು ತಿಳಿಯದೆ ಸಂಬಂಧವಿಲ್ಲದ ಹೇಳಿಕೆ ನೀಡುವುದು ಹುಚ್ಚುತನವಾಗುತ್ತದೆ. ಆರ್ ಎಸ್ ಎಸ್ ಬಗ್ಗೆ ಮಾತಾಡುವ ಮುನ್ನ ಅದರ ಬಗ್ಗೆ ತಿಳಿಯಬೇಕು ಎಂದು ಪ್ರತಿಕ್ರಿಯಿಸಿದರು.
ರಾಹುಲ್ ಗಾಂಧಿ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಕೀಳುಮಟ್ಟದ ಪದ ಬಳಕೆ ಬಗ್ಗೆ ಕೇಳಿದಾಗ ಯಾರು ಕೂಡ ಬೇರೆಯವರ ಬಗ್ಗೆ ಟೀಕೆ ಮಾಡುವಾಗ ಎಲ್ಲೆ ಮೀರಬಾರದು, ನಾನು ಈ ವಿಚಾರದಲ್ಲಿ ಅತ್ಯಂತ ಎಚ್ಚರಿಕೆ ವಹಿಸುತ್ತೇನೆ, ಯತ್ನಾಳ್ ಅವರು ಹೀಗೆ ಏಕೆ ಹೇಳಿದರು ಎಂದು ಅವರಲ್ಲಿಯೇ ಕೇಳಬೇಕು ಎಂದರು.