ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಿದ್ರೆ ಪರಿಣಾಮ ನೆಟ್ಟಗಿರಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಅಗೌರವ ತೋರಿಸಿದರೆ ನಾವೂ ಅದೇ ಧಾಟಿಯಲ್ಲಿ ಪ್ರತ್ಯುತ್ತರ ನೀಡಬೇಕಾಗುತ್ತದೆ. ಕೆಲವು ಫ್ಲೈಓವರ್, ರಸ್ತೆಗಳಿಗೆ ಬಿಜೆಪಿ ನಾಯಕರ ಹೆಸರಿಟ್ಟಿದ್ದಾರೆ. ಯಶವಂತಪುರ ಫ್ಲೈಓವರ್ಗೆ ದೀನದಯಾಳ್ ಉಪಾಧ್ಯಾಯ, ಬಸ್ ನಿಲ್ದಾಣಕ್ಕೆ ಅಟಲ್ ಬಿಹಾರಿ ವಾಜಪೇಯಿ ಹೆಸರಿಟ್ಟಿದ್ದಾರೆ. ಒಂದು ವೇಳೆ ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಿದರೆ ಈ ಎಲ್ಲ ಬೋರ್ಡ್ಗಳಿಗೆ ಮಸಿ ಬಳಿಯುತ್ತೇವೆ ಎಂದು ಎಚ್ಚರಿಸಿದ್ದಾರೆ.
ರಾಜೀವ್ ಗಾಂಧಿ ಕೂಡ ದೇಶಕ್ಕೋಸ್ಕರವೇ ಪ್ರಾಣ ಕೊಟ್ಟಿದ್ದು. ಅವರ ಹೆಸರಿನ ಪ್ರಶಸ್ತಿ ಬದಲಿಸಿದ್ದು ಸರಿಯಲ್ಲ. ಧ್ಯಾನ್ ಚಂದ್ ಹೆಸರು ಬೇರೆ ದೊಡ್ಡ ಯೋಜನೆಗಳಿಗೆ ಇಡಲಿ. ಅದನ್ನ ಬೇಡ ಎನ್ನುವುದಿಲ್ಲ, ಇರುವ ಹೆಸರು ಬದಲಿಸೋದ್ಯಾಕೆ ಎಂದು ಪ್ರಶ್ನಿಸಿದ್ದಾರೆ.ಗುಜರಾತ್ನ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಸ್ಟೇಡಿಯಂ ಎಂದು ಬಿಜೆಪಿಯವರೇ ಹೆಸರಿಟ್ಟಿದ್ದಾರೆ. ನರೇಂದ್ರ ಮೋದಿ ಏನು ದೊಡ್ಡ ಕ್ರೀಡಾಪಟುವಾ? ಅವರೇನು ನೂರು ಕ್ಯಾಚ್ ಹಿಡಿದಿದ್ದಾರಾ? ಸೆಂಚುರಿ ಬಾರ್ಸಿದ್ದಾರಾ? ಇವರೇನು ಸಚಿನ್ ತೆಂಡುಲ್ಕರ್ ತರಹ ದೊಡ್ಡ ಕ್ರಿಕೆಟರಾ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.ಇಂದಿರಾ ಕ್ಯಾಂಟೀನ್ ಹೆಸರು ಬದಲಿಸುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸರ್ಕಾರಕ್ಕೆ ಒತ್ತಾಯಿಸಿದ್ದರು.
ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಿದರೆ ಎಚ್ಚರಿಕೆ ; ಕೆಪಿಸಿಸಿ ಕಾರ್ಯಾದ್ಯಕ್ಷ ರಾಮಲಿಂಗಾ ರೆಡ್ಡಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.