ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿಲ್ಲಾ ಮಂತ್ರಿ ಜಿ.ಟಿ ದೇವರಗೌಡರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನ ಬೆಂಬಲಿಗನ ವಿರುದ್ದ ಗರಂ ಆದ ಘಟನೆ ನಡೆದಿದೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ತಮ್ಮ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಡಿ.ಸಾಲುಂಡಿ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವಾಗ ಕಾಂಗ್ರೆಸ್ ಕಾರ್ಯಕರ್ತನೊಬ್ಬ ನಮ್ಮ ಬೀದಿಯು ಕೆಟ್ಟಿದೆ ಬಂದು ನೋಡಿ ಎಂದು ಏರು ಧ್ವನಿಯಲ್ಲಿ ಸಚಿವರಿಗೆ ಹೇಳಿದ್ದಾನೆ. ಅದರಿಂದ ಕೋಪಗೊಂಡ ಸಚಿವರು ಏರು ಧ್ವನಿಯಲ್ಲೇ ಆತನೊಂದಿಗೆ ಗರಂ ಆಗಿದ್ದಾರೆ. ಮಧ್ಯ ಪ್ರವೇಶ ಮಾಡಿದ ಜಿಲ್ಲಾ ಪಂಚಾಯತ್ ಸದಸ್ಯ ಬೀರಿಹುಂಡಿ ಬಸವಣ್ಣ, ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆಗೆ ಮುಂದಾದಾಗ ತಕ್ಷಣ ಮಧ್ಯ ಪ್ರವೇಶಿಸಿದ ಪೊಲೀಸರು ಇವರನ್ನು ಸಮಾಧಾನ ಪಡಿಸಿದರು.