ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ನೆಟ್ಟಕಲ್ಲಹುಂಡಿ ಗ್ರಾಮದಲ್ಲಿ ಕಾಡಾನೆಯೊಂದು ಗುರುವಾರ ದಾಳಿ ನಡೆಸಿದ್ದು, ಚಿನ್ನಪ್ಪ (61) ಎಂಬುವವರು ಮೃತಪಟ್ಟಿದ್ದಾರೆ.
ಆನೆಯು ಅವರ ಮನೆ ಮೇಲೂ ದಾಳಿ ನಡೆಸಿದೆ. ದಾಳಿಯಲ್ಲಿ ಚಿನ್ನಪ್ಪ ಅವರ ಪತ್ನಿ ಕೊಟ್ಟೂರಮ್ಮ ಗಾಯಗೊಂಡಿದ್ದು, ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆನೆ ದಾಳಿಯಿಂದ ಎರಡು ಮನೆಗಳು ಹಾಗೂ ಒಂದು ಬೈಕ್ ಜಖಂಗೊಂಡಿವೆ.
ಅರಣ್ಯ ಇಲಾಖೆ ವತಿಯಿಂದ ಶಾಸಕ ಅನಿಲ್ ಕುಮಾರ್ ಸಮ್ಮುಖದಲ್ಲಿ ₹ 2.5 ಲಕ್ಷ ಪರಿಹಾರದ ಚೆಕ್ ಅನ್ನು ಮೃತ ವೃದ್ಧನ ಪತ್ನಿ ಕೊಟ್ಟೂರಮ್ಮ ಅವರಿಗೆ ನೀಡಲಾಯಿತು.
ಉಳಿದ ₹ 5 ಲಕ್ಷ ಪರಿಹಾರವನ್ನು ಇನ್ನೆರಡು ದಿನಗಳಲ್ಲಿ ಕೊಡಿಸಲಾಗುವುದು ಎಂದು ಅನಿಲ್ ಕುಮಾರ್ ಹೇಳಿದರು.