ಮೈಸೂರು: ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಮೈಸೂರು ತಾಲೂಕು ಎಪಿಎಂಸಿ ಸದಸ್ಯರು ಎಪಿಎಂಸಿ ಗೇಟ್ ಮುಂಭಾಗ ಪ್ರತಿಭಟನೆ ನಡೆಸಿದರು.
ಎಪಿಎಂಸಿ ಅಧ್ಯಕ್ಷ ಬಸವರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಎಪಿಎಂಸಿ ಅಂಗಡಿ ಮುಂಗಟ್ಟುಗಳನ್ನು ಕ್ಲೋಸ್ ಮಾಡಿಸಿ ಪ್ರತಿಭಟನೆ ನಡೆಸಿದರು.
ವ್ಯಾಪಾರ ವಹಿವಾಟು ಸಂಪೂರ್ಣ ಬಂದ್ ಆಗಿದ್ದು, ಸಂಜೆ ಆರು ಗಂಟೆಯವರೆಗೂ ಸಂಪೂರ್ಣ ಬಂದ್ ಇರಲಿದೆ. ತರಕಾರಿ ಮತ್ತು ಅಂಗಡಿ ಮುಂಗಟ್ಟುಗಳನ್ನು ಮಾಲೀಕರು ತೆರೆದಿಲ್ಲ. ಎಪಿಎಂಸಿ ಸುತ್ತಮುತ್ತ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಎಪಿಎಂಸಿ ಮಾರುಕಟ್ಟೆ ಜನರಿಲ್ಲದೆ ಬಿಕೋ ಎನ್ನುತ್ತಿದೆ. ತರಕಾರಿ,ದಿನಸಿ ಸರಬರಾಜು ಮಾಡುವ ಲಾರಿಗಳು ನಿಂತಲ್ಲೇ ನಿಂತಿವೆ.