ಮೈಸೂರು: ನಗರದಲ್ಲಿ ಕಳಪೆ ರಸ್ತೆ ಕಾಮಗಾರಿಯಿಂದ ಗುಂಡಿಗಳು ಬಾಯ್ತೆರೆದಿವೆ ಎಂದು ಪ್ರತಿಭಟಿಸಿ ರಸ್ತೆಯ ಗುಂಡಿಗಳಲ್ಲಿ ಗಿಡ ನಡುವ ಮೂಲಕ ನಗರ ಬಿಜೆಪಿ ಕಾರ್ಯಕರ್ತರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಇಂದು ನಗರದ ಜೆ.ಎಸ್.ಎಸ್.ಆಸ್ಪತ್ರೆಯಿಂದ ಸುಯೇಜ್ ಫಾರಂವರೆಗೆ ಬಿಜೆಪಿ ನಗರ ಕಾರ್ಯಕರ್ತರು ಇತ್ತೀಚಿಗೆ ದಸರಾದಲ್ಲಿ ರಸ್ತೆ ಕಾಮಗಾರಿ ನಡೆಸಿದರು ಕಳಪೆ ಕಾಮಗಾರಿಯಿಂದ ಒಂದೇ ವಾರದಲ್ಲಿ ರಸ್ತೆಯಲ್ಲಿ ಗುಂಡಿಗಳು ಬಾಯ್ತೆರೆದು ನಿಂತಿದ್ದು, ಇದನ್ನ ಪ್ರತಿಭಟಿಸಿ ನಗರ ಬಿಜೆಪಿ ಕಾರ್ಯಕರ್ತರು ರಸ್ತೆಯ ಗುಂಡಿಗಳಲ್ಲಿ ಗಿಡ ನೆಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಪಾದ ಯಾತ್ರೆ ನಡೆಸಿದರು.
ಮಳೆನೀರು ಸರಿಯಾಗಿ ಹರಿದು ಹೋಗಲು ಸ್ಥಳವಿಲ್ಲದೇ ಇತ್ತೀಚೆಗೆ ಸುರಿದ ಭಾರೀ ಮಳೆಗೆ ಕನಕಗಿರಿ ಸೇರಿದಂತೆ ಹಲವೆಡೆ ಮಳೆ ನೀರು ಮನೆಗಳಿಗೆ ನುಗ್ಗಿತ್ತು. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಎಲ್ಲ ಕಡೆಯೂ ಗುಣಮಟ್ಟದ ಕಾಮಗಾರಿ ನಡೆಸಿ ಎಂದು ಒತ್ತಾಯಿಸಿದರು.
ಬಾವಿ ಇದೆ ಎಚ್ಚರಿಕೆ, ಜನವಿರೋಧಿ ಸರ್ಕಾರಕ್ಕೆ ಧಿಕ್ಕಾರ, 10ಕೋಟಿ ರೂ.ಹಣದಲ್ಲಿ ಕೆಲಸ ಮಾಡಿದ್ದೆಷ್ಟು? ನುಂಗಿದ್ದೆಷ್ಟು? ಮೃತ್ಯುಕೂಪವಿದೆ ಎಚ್ಚರಿಕೆ ಎಂಬಿತ್ಯಾದಿ ಫಲಕಗಳನ್ನು ಹೊತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ರಾಜಕಾಲುವೆ ಪುನರ್ ನಿರ್ಮಿಸಿ, ಮಳೆಸಂತ್ರಸ್ತರಿಗೆ ಪರಿಹಾರ ನೀಡಿ ಎಂದು ಒತ್ತಾಯಿಸಿದರು.
ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್ ವಾಂಟೆಡ್ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್ ಸಿಂಗ್ ನಿಜ್ಜಾರ್ ನನ್ನು ಹತ್ಯೆ…
ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…
ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…
ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…
ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…
ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…