ಎಚ್.ಡಿ.ಕೋಟೆ: ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೊಬ್ಬ ಗಾಯಗೊಂಡಿರುವ ಘಟನೆ ಮೈಸೂರು ಮಾನಂದವಾಡಿ ಹೆದ್ದಾರಿಯ ಬೊಪ್ಪನಳ್ಳಿ ಗೇಟ್ ಬಳಿ ನಡೆದಿದೆ.
ಎಚ್.ಡಿ.ಕೋಟೆ ತಾಲೂಕಿನ ನಿಲುವಾಗಿಲು ಗ್ರಾಮದ ನಿವಾಸಿ ಜಗದೀಶ್ (32) ಮೃತಪಟ್ಟ ದುರ್ದೈವಿ. ಶಮಂತ್ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಮಂತ್ ಎಂಬಾತ ಕಾರು ಚಾಲನೆ ಮಾಡಿಕೊಂಡು ಗೆಳೆಯ ಜಗದೀಶ್ ಜತೆ ತೆರಳುತ್ತಿದ್ದನು ಎನ್ನಲಾಗಿದ್ದು, ಮಾನಂದವಾಡಿ ಹೆದ್ದಾರಿಯ ಬೊಪ್ಪನಳ್ಳಿ ಗೇಟ್ ಬಳಿ ತೆರಳುವಾಗ ಕಾರು ಚಾಲಿಸುತ್ತಿದ್ದ ಶಮಂತ್ನ ನಿಯಂತ್ರಣ ತಪ್ಪಿದ ಕಾರು ಪಲ್ಟಿ ಹೊಡೆದಿದೆ.
ಪರಿಣಾಮ ಕಾರಿನಲ್ಲಿದ್ದ ಜಗದೀಶ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಚಾಲಕ ಶಮಂತ್ನನ್ನು ರಕ್ಷಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಎಚ್.ಡಿ.ಕೋಟೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.