ಮೈಸೂರು: ನಗರದ ಜಿಲ್ಲಾಧಿಕಾರಿ ಕಚೇರಿಯ ರಸ್ತೆಯಲ್ಲಿ ಮಹಿಳೆಯರು ನಾಟಿ ಕಾರ್ಯ ಮಾಡಿ, ಕೈಯಲ್ಲಿ ಪೊರಕೆ ಹಿಡಿದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆಗಳು ಮುಂದುವರಿದಿವೆ. ಇಂದು ನಗರದಲ್ಲಿ ರಸ್ತೆಯಲ್ಲಿಯೇ ನಾಟಿ ಭತ್ತ ಮಾಡುವ ಮೂಲಕ ಮಹಿಳೆಯರು ವಿಶಿಷ್ಟ ಪ್ರತಿಭಟನೆ ನಡೆಸಿದ್ದಾರೆ. ಸುಪ್ರೀಂ ಕೋರ್ಟ್ ತಮಿಳುನಾಡಿಗೆ ಮತ್ತೆ ಪ್ರತಿ ದಿನ 6 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿದೆ. ಕಾವೇರಿ ಭಾಗದ ಜಲಾಶಯಗಳಲ್ಲಿ ನೀರಿಲ್ಲ. ನೀರು ಎಲ್ಲಿಂದ ತರುವುದು ಎಂದು ಘೋಷಣೆಗಳನ್ನು ಕೂಗುತ್ತ ರಸ್ತೆಯಲ್ಲಿ ನಾಟಿ ಮಾಡಿ ಕಿಡಿಕಾರಿದರು.