ಮೈಸೂರು: ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ಕಾರಿನ ಗ್ಲಾಸ್ ಗಳನ್ನು ಪುಡಿ ಪುಡಿ ಮಾಡಿರುವ ಘಟನೆ ವಿಜಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಿನ್ನೆ ಮಧ್ಯರಾತ್ರಿ ತಮ್ಮ ಮನೆಯ ಮುಂದೆ ನಿಲ್ಲಿಸಿದ 12 ಕಾರುಗಳಿಗೆ ಬೈಕ್ ನಲ್ಲಿ ಬಂದು ಇಬ್ಬರು ದುಷ್ಕರ್ಮಿಗಳು ಕಾರಿನ ಗಾಜನ್ನು ಒಡೆದು ಪರಾರಿಯಾಗಿದ್ದಾರೆ. ಕಳೆದ ಆರು ದಿನಗಳಲ್ಲಿ ಎರಡನೇ ಬಾರಿ ಇಂತಹ ಪ್ರಕರಣ ನಡೆದಿದ್ದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.
ಈ ಹಿನ್ನಲ್ಲೆಯಲ್ಲಿ ರಾತ್ರಿ ಹೊತ್ತಿನಲ್ಲಿ ಪೊಲೀಸ್ ಸಿಬ್ಬಂದಿಯನ್ನು ವಾಹನಗಳಲ್ಲಿ ಗಸ್ತು ಹೊಡೆಯುವಂತೆ ನಗರ ಪೊಲೀಸ್ ಕಮಿಷನರ್ ಸುಬ್ರಮಣ್ಯೇಶ್ವರ ರಾವ್ ಆದೇಶಿಸಿದ್ದು ಮನೆಯ ಮುಂಭಾಗದಲ್ಲಿ ಅಳವಿಡಿಸಿರುವ ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ಪಡೆದು ಆರೋಪಿಗಳ ಪತ್ತೆಗಾಗಿ ವಿಜಯನಗರ ಪೊಲೀಸರು ಬಲೆ ಬೀಸಿದ್ದಾರೆ.