ಮೈಸೂರು: ನಂಜನಗೂಡು ತಾಲೂಕಿನ ಜಿ.ಮಾರನಹಳ್ಳಿ ನಿವಾಸಿ ರಾಜು (42) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಈತ ಆ.14 ರಂದು ಆತ್ಮಹತ್ಯೆಗೆ ಯತ್ನಿಸಿ, ಕೆ.ಆರ್.ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ತನ್ನ ಪತ್ನಿ, ಮಗಳು ಹಾಗೂ ಅತ್ತೆಯ ಮುಂದೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳೋ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತಪಟ್ಟ ಘಟನೆ ಜಿಲ್ಲೆಯ ಚೋರನಹಳ್ಳಿಯಲ್ಲಿ ನಡೆದಿದೆ.
ಕುಡಿತದ ಚಟಕ್ಕೆ ದಾಸನಾಗಿದ್ದ ರಾಜು ಸಾಕಷ್ಟು ಸಾಲ ಮಾಡಿಕೊಂಡಿದ್ದನು. ಗಂಡನ ಬೇಜವಾಬ್ದಾರಿ ವರ್ತನೆಯಿಂದ ಬೇಸತ್ತಿದ್ದ ಪತ್ನಿ ಗೌರಮ್ಮ ಚೋರನಹಳ್ಳಿಯಲ್ಲಿರುವ ತವರು ಮನೆಗೆ ಸೇರಿಕೊಂಡಿದ್ದರು. ಆಗಾಗ ರಾಜು ಅತ್ತೆ ಮನೆಗೆ ಬಂದು ಹಣಕ್ಕಾಗಿ ಪೀಡಿಸುತ್ತಿದ್ದರು.
ಆ.14 ರಂದು ರಾತ್ರಿ ರಾಜು ಹಣ ಕೇಳಲು ಅತ್ತೆ ಮನೆಗೆ ಬಂದು ಎಲ್ಲರ ಮುಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದನು. ಅಲ್ಲದೇ ಇದೇ ಸಂದರ್ಭದಲ್ಲಿ ಪತ್ನಿ ಹಾಗೂ ಮಗಳನ್ನು ತಬ್ಬಿಕೊಳ್ಳಲು ಪ್ರಯತ್ನಿಸಿದ್ದನು. ಆದರೆ ಅವರಿಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ತೀವ್ರ ಗಾಯಗೊಂಡ ರಾಜುವನ್ನ ಕೆ ಆರ್ ಆಸ್ಪತ್ರೆಗೆ ದಾಖಲಾಗಿತ್ತು.
ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…
ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್ಜೈಂಟ್ಸ್ ತಂಡವನ್ನು ಆತಿಥೇಯ ಸನ್ರೈಸರ್ಸ್ ಹೈದರಾಬಾದ್ ತಂಡ…
ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…
ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.