ಮೈಸೂರು: ಇನ್ನೂ ಹದಿನೈದು ದಿನಗಳಲ್ಲಿ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲಿ ಎಂದು ಅವರ ಅಭಿಮಾನಿಗಳು ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ 101 ತೆಂಗಿನಕಾಯಿ ಒಡೆದು ಹರಕೆ ಹೊತ್ತುಕೊಂಡರು.
ನಗರದ ಹೆಚ್ ಡಿ ದೇವೇಗೌಡ ಅಭಿಮಾನಿ ಬಳಗದ ಸದಸ್ಯರು ನಾಡ ಆದಿದೇವತೆ ನೆಲೆಸಿರುವ ಚಾಮುಂಡಿಬೆಟ್ಟಕ್ಕೆ ಹೋಗಿ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಇನ್ನೂ ಹದಿನೈದು ದಿನಗಳಲ್ಲಿ ಹೆಚ್ ಡಿ ಕುಮಾರಸ್ವಾಮಿರವರು ಕರ್ನಾಟಕದ ಮುಖ್ಯಮಂತ್ರಿ ಆಗಲಿ ಎಂದು ಪೂಜೆ ಸಲ್ಲಿಸಿ ಹರಕೆ ಹೊತ್ತುಕೊಂಡರು.
ಜೆಡಿಎಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಹರ್ಷ ದೇವೇಗೌಡ 104 ಸ್ಥಾನ ಹೊಂದಿರುವ ಬಿಜೆಪಿ ಹಿಂಬಾಗಲಿನಿಂದ ಅಧಿಕಾರ ಹಿಡಿಯಲು ಯತ್ನಿಸಿದ್ದು ಇನ್ನೂ ಹದಿನೈದು ದಿನಗಳಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.