ಮೈಸೂರು: ಉತ್ತನಹಳ್ಳಿ ರಸ್ತೆಯಲ್ಲಿರುವ ಪರಶುನಾಯಕನ ಕೆರೆ ಬಳಿ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ಆಕಸ್ಮಿಕವಾಗಿ ಆಯತಪ್ಪಿ ಕೆರೆಗೆ ಬಿದ್ದಿದ್ದು ಓರ್ವನ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರಿಗೆ ಶೋಧ ಕಾರ್ಯ ಮುಂದುವರೆದಿದೆ.
ನಗರದ ಕೈಲಾಶಪುರಂ ನಿವಾಸಿ ಗಣೇಶ್ (40) ಮೃತ ದುರ್ದೈವಿ. ಇನ್ನಿಬ್ಬರಿಗಾಗಿ ನುರಿತ ಈಜುಗಾರರು ಶೋಧ ನಡೆಸುತ್ತಿದ್ದಾರೆ. ಮೈಸೂರುನಗರದ ಹೊರವಲಯದ ಪಿಎಂಸಿ ಸಮೀಪದ ಪರಶುನಾಯಕನ ಕೆರೆ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಕೆರೆಗೆ ಉರುಳಿಬಿದ್ದಿದ್ದು, ಓರ್ವನ ಶವ ಪತ್ತೆಯಾಗಿದೆ ಎನ್ನಲಾಗಿದೆ.
ಕೆ.ಆರ್.ಠಾಣೆಯ ಇನ್ಸ್ಪೆಕ್ಟರ್ ಪ್ರಕಾಶ್, ಸಬ್ ಇನ್ಸ್ಪೆಕ್ಟರ್ ಸುನಿಲ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದು, ನುರಿತ ಈಜುಗಾರರು ಕೆರೆಯಿಂದ ಶವಗಳನ್ನು ಹೊರತೆಗೆಯಲು ಹರಸಾಹಸ ಪಡುತ್ತಿದ್ದಾರೆ.
ಈವರೆಗೆ ಓರ್ವನ ಶವವಷ್ಟೇ ಪತ್ತೆಯಾಗಿದೆ. ಈಚೆಗೆ ಸುರಿದ ಮಳೆಯಿಂದ ಕೆರೆಯಲ್ಲಿ ನೀರು ತುಂಬಿದ್ದು, ಹಸಿರು ಬೆಳೆದು ಪಾಚಿಕಟ್ಟಿದೆ. ಕೆ.ಆರ್. ಠಾಣೆ ಎಸಿಪಿ ಧರ್ಮಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್ಗೆ ಪ್ರವೇಶಿಸಿದೆ. ಇನ್ನು ಆರ್ಸಿಬಿ…
ನಗರದ ಮಂಗಲಪೇಟ್ ಸಮೀಪದ ಮೆಥೋಡಿಸ್ಟ್ ಚರ್ಚ್ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.
ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್ ಫಾರ್ ಫ್ರಾಡ್…
ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…
ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…