News Karnataka Kannada
Sunday, April 28 2024
ಮೈಸೂರು

ಕೊನೆಗೂ ಪೊಲೀಸರ ಬಲೆಗೆ ಬಿದ್ದ ಮೈಸೂರು ಅತ್ಯಾಚಾರ ಪ್ರಕರಣದ ಆರೋಪಿಗಳು

Praveen Sood 28082021
Photo Credit :
ಮೈಸೂರು : ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ  ಆ.24, ಚಾಮುಂಡಿಬೆಟ್ಟದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತಂಡ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬಗ್ಗೆ ಇಂದು ಮೈಸೂರಿನಲ್ಲಿ  ಪೊಲೀಸ್ ಮಹಾ ನಿರ್ದೇಶಕರು ಪತ್ರಿಕಾ ಘೋಷ್ಠಿ ಕರೆದು ಮಾಹಿತಿ ನೀಡಿದರು
ಈ ವರೆಗೂ ಸಂತ್ರಸ್ತಯಿಂದ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ, ಅಂದು  ಜೊತೆ ಇದ್ದ ಆಕೆಯ ಸ್ನೇಹಿತನ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಸತತ 84 ಗಂಟೆಗಳ ಕಾರ್ಯಾಚರಣೆ ನಂತರ ಆರೋಪಿಗಳನ್ನು ಪೊಲೀಸರು ಮಟ್ಟ ಹಾಕಿದ್ದಾರೆ.
ಮೊದಲಿಗೆ ಆರೂಪಿಗಳೆಲ್ಲರೂ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಎಂದು ಭಾವಿಸಿದ್ದರು ಆದರೆ ನಂತರ ಅವರೆಲ್ಲರೂ ತಮಿಳುನಾಡು ಮೂಲದವರು ಹಾಗೂ ಎಲ್ಲರೂ ದಿನಗೂಲಿ ನೌಕರರು ಎಂದು ತಿಳಿದುಬಂದಿದೆ.
ಈ ಐವರು ಆರೂಪಿಗಳಲ್ಲಿ ಒಬ್ಬನು ಬಾಲಾಪರಾಧಿಯಾಗಿದ್ದು ಅವರೆಲ್ಲರೂ ಕೆಲಸದ ಮೇಲೆ ಪದೇ ಪದೇ ಮೈಸೂರಿಗೆ ಬರುತ್ತಿದ್ದರು.
ಮಂಗಳವಾರವೂ ಸಹ ಮೈಸೂರಿಗೆ ಕೆಲಸದ ಮೇಲೆ ಬಂದಿದ್ದ ಆರೋಪಿಗಳು 7 ಗಂಟೆಯ ಸುಮಾರಿಗೆ  ಪಾರ್ಟಿ ಮಾಡಿ ವಾಪಸ್ಸು ಹೋಗುವಾಗ ಈ ದುಕೃತ್ಯ ಎಸಗಿದ್ದಾರೆ . ಬಂಧಿತ ಆರೋಪಿಗಳಲ್ಲಿ ಕೆಲವರು ಕ್ರಿಮಿನಲ್ ಹಿನ್ನಲೆಯುಳ್ಳವರಾಗಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿಗಳು ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತನಲ್ಲಿ 3 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು ಎಂದು ಪೋಲಿಸರು ತಿಳಿಸಿದ್ದಾರೆ.
ಆರೋಪಿಗಳನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಪೊಲೀಸರಿಗೆ 5 ಲಕ್ಷ ರೂಪಾಯಿ ಬಹುಮಾನವನ್ನು ರಾಜ್ಯ ಮಹಾ ನಿರ್ದೇಶಕ ಪ್ರವೀಣ್ ಸೂದ್ ಘೋಷಿಸಿದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು