Categories: ಮೈಸೂರು

ಕೊರೋನಾ ಸಂಕಷ್ಟ: ನಾಟಕ ಕಲಾವಿದರಿಗೆ ದಿನಸಿ ಕಿಟ್ ವಿತರಣೆ

ಮಂಗಳೂರು: ತುಳು ನಾಟಕ ಕಲಾವಿದರ ಒಕ್ಕೂಟ(ರಿ.) ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಾಲ್ ಬೈಲ್, ಫ್ರೆಂಡ್ಸ್ ತುಳುವೆರ್ ಕುವೈಟ್ ಇದರ ಸಂಯುಕ್ತ ಆಶ್ರಯದಲ್ಲಿ ನಾಟಕ ಕಲಾವಿದರಿಗೆ ಆಹಾರ ದಿನಸಿ ಕಿಟ್ ವಿತರಣೆ ಕಾರ್ಯಕ್ರಮ ಇಂದು ಮುಂಜಾನೆ ಕದ್ರಿಯ ಗೋಕುಲ್ ಸಭಾಭವನದಲ್ಲಿ ಜರುಗಿತು.

 

ಈ ವೇಳೆ ಮಾತಾಡಿದ ಪೋಲಿಸ್ ಕಮಿಷನರ್ ಎನ್. ಶಶಿಕುಮಾರ್ ಅವರು, “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನನಿತ್ಯ ಎನ್ನುವಂತೆ ಸಾಂಸ್ಕೃತಿಕ ಕಾರ್ಯಕ್ರಮ ಜರುಗುತ್ತವೆ. ಇಲ್ಲಿನ ಕಲಾಪೋಷಕರು ಕೂಡ ಕಲಾವಿದರ ಜೊತೆಯಲ್ಲಿದ್ದಾರೆ. ಇದೊಂದು ಮಹಾಮಾರಿಯ ಸಂದರ್ಭದಲ್ಲಿ ನಾವು ಜೀವ ಉಳಿಸಿಕೊಳ್ಳುವುದೇ ದೊಡ್ಡ ಸಂಘರ್ಷವಾಗಿದೆ. ನಮ್ಮ ಸ್ನೇಹಿತರು, ಬಂಧುಗಳನ್ನು ಕಳೆದುಕೊಂಡಿದ್ದೇವೆ.

 

 ದಿನಗೂಲಿ ಕಾರ್ಮಿಕರು, ಸಣ್ಣ ಸಣ್ಣ ಕೆಲಸ ಮಾಡುವವರು, ಕಲಾವಿದರು ಬಹಳಷ್ಟು ಸಂಕಷ್ಟದಲ್ಲಿದ್ದಾರೆ. ಶಿಕ್ಷಣ ಸಂಸ್ಥೆಗಳು ಭಾರೀ ಹಿನ್ನಡೆಯನ್ನು ಅನುಭವಿಸಿವೆ. ಎಲ್ಲರೂ ಸಂತೋಷವಾಗಿದ್ದಾಗ ಸಾಂಸ್ಕೃತಿಕ ಕಾರ್ಯಕ್ರಮ ಜರುಗುತ್ತವೆ. ಈಗ ಎಲ್ಲರೂ ದುಃಖದಲ್ಲಿದ್ದಾಗ ಕಲಾವಿದರು ಮಾಡುವುದಾದರೂ ಏನು? ಕೊರೋನಾ ಮಹಾಮಾರಿಯ ಈ ಸಂದರ್ಭದಲ್ಲಿ ಇಂತಹ ಕಲಾವಿದರನ್ನು ರಕ್ಷಿಸುವ ಸಂಘಟನೆಗಳು ಇನ್ನಷ್ಟು ಬೆಳೆಯಬೇಕು. ಜಾತಿ ಧರ್ಮ ರಾಜಕೀಯ ಬಿಟ್ಟು ಮನುಷ್ಯತ್ವಕ್ಕೆ ಬೆಲೆ ಸಿಗುವ ಸಮಯ ಇದು. ಹೀಗಾಗಿ ಸಾಮರ್ಥ್ಯ ಇದ್ದವರು ಇಲ್ಲದವರಿಗೆ ತಮ್ಮಿಂದಾದ ಸಹಾಯ ಮಾಡಿಕೊಂಡು ಬನ್ನಿ. ಇದು ಒಂದಲ್ಲ ಒಂದು ರೀತಿಯಲ್ಲಿ ನಿಮ್ಮನ್ನು ಕಾಯುತ್ತದೆ” ಎಂದು ಹೇಳಿದರು.

 

ಪ್ರಸ್ತಾವಿಕ ಮಾತಾಡಿದ ಹಿರಿಯ ರಂಗಕರ್ಮಿ ಲಕ್ಷ್ಮಣ ಕುಮಾರ್ ಮಲ್ಲೂರು ಅವರು, “ಯಕ್ಷಗಾನ ಕಲಾವಿದರು ಹಿಂದೆ ಬಹಳಷ್ಟು ಸಂಕಷ್ಟದಲ್ಲಿದ್ದರು. ಮಳೆಗಾಲದಲ್ಲಿ ಯಕ್ಷಗಾನ ಪ್ರದರ್ಶನವಿಲ್ಲದೆ ಕಲಾವಿದರು ಇನ್ನಿಲ್ಲದ ಸಮಸ್ಯೆ ಎದುರಿಸುತ್ತಿದ್ದರು. ಈ ವೇಳೆ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪನೆ ಮಾಡುವ ಮೂಲಕ ಪಟ್ಲ ಸತೀಶ್ ಶೆಟ್ಟಿ ಅವರು ಕಲಾವಿದರಿಗೆ ಬೆನ್ನೆಲುಬಾಗಿ ನಿಂತರು. ಈಗ ಯಕ್ಷಗಾನ, ನಾಟಕ ಕಲಾವಿದರು ನೆಮ್ಮದಿಯಿಂದ ಇರಬೇಕಾದರೆ ಪಟ್ಲ ಫೌಂಡೇಶನ್ ಟ್ರಸ್ಟ್ ಕಾರಣ. ಕಳೆದ ಬಾರಿ ಲಾಕ್ ಡೌನ್ ನಲ್ಲೂ ಸುಮಾರು 300 ಕುಟುಂಬಗಳಿಗೆ ಆಹಾರ ದಿನಸಿ ಕಿಟ್ ವಿತರಿಸಿದ್ದು ಈ ಬಾರಿ ಮತ್ತೆ ಅದನ್ನು ಇತರ ಸಂಘಟನೆಗಳ ಸಹಯೋಗದಲ್ಲಿ ಮುಂದುವರಿದಿದೆ” ಎಂದರು.

 

 ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ಲಯನ್ ಕಿಶೋರ್ ಡಿ ಶೆಟ್ಟಿ, ಲಯನ್ಸ್ ಉಪ ರಾಜ್ಯಪಾಲ ವಸಂತ ಶೆಟ್ಟಿ, ಪಟ್ಲ ಫೌಂಡೇಶನ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಉಪಾಧ್ಯಕ್ಷ ಡಾ. ಮನು ರಾವ್, ಸಂಘಟನಾ ಕಾರ್ಯದರ್ಶಿ ನವನೀತ ಶೆಟ್ಟಿ ಕದ್ರಿ, ಜಗನ್ನಾಥ ಶೆಟ್ಟಿ ಬಾಳ, ರವಿಚಂದ್ರ ಶೆಟ್ಟಿ ಅಶೋಕ‌ನಗರ, ಗೋಕುಲ್ ಕದ್ರಿ, ಗೋಕುಲ್ ಕದ್ರಿ,, ಪ್ರದೀಪ್ ಆಳ್ವ, ತಾರಾನಾಥ್ ಶೆಟ್ಟಿ ಬೋಳಾರ, ಲಕ್ಷ್ಮಣ ಕುಮಾರ್ ಮಲ್ಲೂರು, ಕ್ಯಾಟ್ಕಾ ಅಧ್ಯಕ್ಷ ಮೋಹನ್ ಕೊಪ್ಪಲ, ಮಧು ಸುರತ್ಕಲ್, ಗೋವರ್ಧನ್ ಶೆಟ್ಟಿ, ಶ್ರೀಮತಿ ಸ್ವರೂಪ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ನವನೀತ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Desk

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago