ಮೈಸೂರು: ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಚಾಮುಂಡಿ ಬೆಟ್ಟಕ್ಕೆ ಮಂಗಳವಾರ ಬೆಳಿಗ್ಗೆ ಭೇಟಿ ನೀಡಿದರು. ಅಧಿಕಾರ ಸ್ವೀಕಾರಕ್ಕೂ ಮುನ್ನಾ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಪತಿ ಸುಧೀರ್ ರೆಡ್ಡಿ ಜೊತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ನೂತನ ಜಿಲ್ಲಾಧಿಕಾರಿಯನ್ನು ಚಾಮುಂಡಿ ಬೆಟ್ಟ ದೇಗುಲದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಸ್.ಯತಿರಾಜ್ ಸಂಪತ್ ಕುಮಾರನ್, ವ್ಯವಸ್ಥಾಪಕ ಗೋವಿಂದ ರಾಜ್ ಹಾಗೂ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ಸ್ವಾಗತಿಸಿದರು.