ಮೈಸೂರು: ಚಾಮುಂಡಿ ಬೆಟ್ಟ ತಪ್ಪಲಿನ ಗೌರಿಶಂಕರನಗರ ಹಾಗೂ ಸುತ್ತಮುತ್ತಲ ಪ್ರದೇಶಗಳ ಜನತೆಯ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ.
ಕಳೆದ ನಾಲ್ಕು ದಿನಗಳಿಂದ ಗೌರಿಶಂಕರ ನಗರದ ಸುತ್ತಮುತ್ತಲ ಬಂಡೆ, ಮರಗಳ ಮೇಲೆ ಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸಿತ್ತು. ಇದರಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಬೋನ್ ಇಟ್ಟಿದ್ದು, ಇಂದು ಬೆಳಗ್ಗೆ ಚಿರತೆ ಬೋನಿಗೆ ಬಿದ್ದ ಮಾಹಿತಿ ತಿಳಿದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.