ಮೈಸೂರು: ಉತ್ತಮ ನಾಳೆಗಾಗಿ ನಾವೆಲ್ಲರೂ ಜೊತೆಯಾಗಿರೋಣ ಎನ್ನುವ ಸದಾಶಯದೊಂದಿಗೆ ಮೈಸೂರು ನಂಜನಗೂಡು ರಸ್ತೆಯಲ್ಲಿರುವ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ವಿ.ಪಿ. ದೀನದಯಾಳು ನಾಯ್ಡು ನಗರದಲ್ಲಿ ಡಿ.29ರಂದು 17ನೇ ರಾಷ್ಟ್ರೀಯ ಜಾಂಬೂರಿ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ್ಕೌಟ್ಸ್ ಆಂಡ್ ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ತಿಳಿಸಿದರು.
ದೇಶದ ಎಲ್ಲಾ ರಾಜ್ಯಗಳಿಂದ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಸುಮಾರು 25 ಸಾವಿರ ಮಂದಿ ಪಾಲ್ಗೊಳ್ಳಲಿದ್ದಾರೆ. ಇದು 17ನೇ ಜಾಂಬೂರಿ ಉತ್ಸವವವಾಗಿದ್ದು ಇಲ್ಲಿಯವರೆಗೆ ಮೂರು ಉತ್ಸವಕ್ಕೆ ಕರ್ನಾಟಕ ಆತಿಥ್ಯ ನೀಡಿದೆ. ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ ನಡೆಯಲಿದೆ.
ದೇಶದ ಎಲ್ಲಾ ಭಾಗಗಳಿಂದ ಆಗಮಿಸುವ ಸ್ಕೌಟ್ಸ್ ಮತ್ತು ಗೈಡ್ಸ್ ನ ವಿದ್ಯಾರ್ಥಿ ಸಮುದಾಯ ಹಾಗೂ ತರಬೇತುದಾರರಿಗೆ ಅವಶ್ಯಕವಾದ ಮೂಲಭೂತ ಸೌಕರ್ಯಗಳನ್ನು ಸೃಷ್ಟಿಸಲು ಅನೇಕ ಸಮಿತಿಗಳನ್ನು ರಚಿಸಲಾಗಿದೆ. ಆಹಾರ ಪೂರೈಕೆ, ವಸತಿ, ಆರೋಗ್ಯ, ಭದ್ರತೆ, ನೀರು ಮತ್ತು ವಿದ್ಯುತ್ ಪೂರೈಕೆ, ಸಾರಿಗೆ ಸಂಪರ್ಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಕುರಿತಂತೆ ಸಮಿತಿಗಳನ್ನು ರಚಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ವೆಂಕಟೇಶ್, ಸ್ಕೌಟ್ಸ್ ಗೈಡ್ಸ್ ನ ಜಿಲ್ಲಾ ಮುಖ್ಯ ಆಯುಕ್ತ ವಿಶ್ವನಾಥ, ಪ್ರಚಾರ ಮಾಧ್ಯಮ ಸಮಿತಿಯ ಎಂ.ಎ. ಚೆಲ್ಲಯ್ಯ ಮತ್ತಿತರರು ಉಪಸ್ಥಿತರಿದ್ದರು.
ಲೋಕಸಭಾ ಚುನಾವಣೆ ಯ ಎರಡು ಹಂತದ ಮತದಾನ ಈಗಾಗಲೇ ಮುಗಿದಿದೆ. ಮೇ 7ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಈ…
ಲೋಕಸಭಾ ಚುನಾವಣಾ ಹಿನ್ನಲೆ ಮೊದಲ ಹಂತದ ಮತದಾನ ಈಗಾಗಲೇ ಮುಗಿದಿದ್ದು ಇದೀಗ 2ನೇ ಹಂತದ ಚುನಾವಣೆ ಪ್ರಚಾರ ಭರ್ಜರಿಯಾಗಿ ಸಾಗುತ್ತಿದೆ.ಪ್ರಧಾನಿ…
ಗ್ರೀವ್ ಕಾಟನ್ ಮಾಲೀಕತ್ವದ ಆಂಪಿಯರ್ ಎಲೆಕ್ಟ್ರಿಕ್ ಕಂಪನಿ ತನ್ನ ಹೊಚ್ಚ ಹೊಸ ನೆಕ್ಸಸ್ ಇವಿ ಸ್ಕೂಟರ್ ಬಿಡುಗಡೆ ಮಾಡಿದ್ದು, ಹೊಸ…
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಮಠಾಣ, ನಿಜಾಂಪುರ, ಕೊಳಾರ(ಕೆ), ಗೋರನಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಜೆಡಿಎಸ್ ಮುಖಂಡರು ಪಕ್ಷ…
ಜಿಲ್ಲೆಯ ಬಿಜೆಪಿ ಲೋಕಸಭಾ ಅಭ್ಯರ್ಥಿ ಉಮೇಶ ಜಾಧವ್ ಅವರ ಪ್ರಚಾರ ನಿಮಿತ್ಯ ಜಿಲ್ಲೆಯ ಹೈವೊಲ್ಟೇಜ್ ಕ್ಷೇತ್ರ ಅಫಜಲಪುರ ಪಟ್ಟಣದಲ್ಲಿ ಬಿಜೆಪಿ…
ಲೋಕಸಭಾ ಚುನಾವಣೆಗೆ ಹಿನ್ನಲೆ ಸಂಬಂಧಿಸಿದಂತೆ ಇಂದು ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷದ…