News Karnataka Kannada
Monday, May 20 2024
ಮೈಸೂರು

ಜೂ.5ರಂದು ‘ಅಯೋಧ್ಯ ಕಾಂಡ’ ನಾಟಕ ಪ್ರದರ್ಶನ

Photo Credit :

ಮೈಸೂರು: ಕುವೆಂಪುನಗರದಲ್ಲಿರುವ ಗಾನಭಾರತಿ ಸಭಾಂಗಣದಲ್ಲಿ  ಜೂ.5ರಂದು  ಸಂಜೆ 7ಕ್ಕೆ ವಾಲ್ಮೀಕಿ ರಾಮಾಯಣ ಆಧಾರಿತ ‘ಅಯೋಧ್ಯ ಕಾಂಡ’ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

ಹಿರಿಯ ರಂಗನಿರ್ದೇಶಕರಾದ ಪ್ರಸನ್ನ ಅವರು ರಚಿಸಿ  ನಿರ್ದೇಶಿಸಿದ್ದು, ಅನುಶ್ಶೆಟ್ಟಿ ಸಂಗೀತ ಸಂಯೋಜಿಸಿದ್ದು, ವಸ್ತ್ರಾಲಂಕಾರ ನಂದಿನಿ.ಕೆ.ಆರ್ ಹಾಗೂ ಪ್ರಸಾದನ ಬಿ.ಎಮ್. ರಾಮಚಂದ್ರ ನಿರ್ವಹಿಸಲಿದ್ದಾರೆ. ಮುಖ್ಯ ಪಾತ್ರದಲ್ಲಿ ರಂಗಾಯಣದ ಹಿರಿಯ ನಟರಾದ  ಪ್ರಶಾಂತ್ ಹಿರೇಮಠ್, ರಾಷ್ಟ್ರೀಯ ನಾಟಕ ಶಾಲೆಯ ಪದವೀಧರೆ ಪದ್ಮಶ್ರೀ. ಸಿ.ಆರ್, ಮುನ್ನ, ರಾಜಲಕ್ಷ್ಮೀ ಹಾಗೂ ವಿಶ್ವಾಸ್ ಅಭಿನಯಿಸಲಿದ್ದಾರೆ.

ಜೂನ್ ತಿಂಗಳ ಈ ಪ್ರದರ್ಶನಗಳು ನಾಟಕದ ಮರು ಪ್ರದರ್ಶನವಾಗಿದ್ದು, ಮೇ ತಿಂಗಳಲ್ಲಿ ನಾಲ್ಕು ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ. ಇದೊಂದು ಸಂಗೀತಮಯ ನಾಟಕವಾಗಿದ್ದು, ಸಂಗೀತಾಭಿಮಾನಿಗಳಲ್ಲಿ ಆಸಕ್ತಿ ಕೆರಳಿಸಿದೆ. ನಾಡಿನ ಹಲವು ಲೇಖಕರು, ರಂಗಕರ್ಮಿಗಳು ಹಾಗೂ ಸಂಗೀತ ವಿಮರ್ಶಕರು ನಾಟಕದ ಕುರಿತು ಈಗಾಗಲೇ ಒಳ್ಳೆಯ  ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9590259095 ನ್ನು ಸಂಪರ್ಕಿಸಬಹುದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು