Categories: ಮೈಸೂರು

ಜೂ.5ರಂದು ಮೈಸೂರು ಡಿಸಿ ಕಚೇರಿ ಎದುರು ರೈತರ ಪ್ರತಿಭಟನೆ

ಮೈಸೂರು: ಸರ್ಕಾರ ನಡೆಸುತ್ತಿರುವ ರೈತ ವಿರೋಧಿ ಧೋರಣೆಗಳ ವಿರುದ್ಧ ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜೂ.5 ರಂದು ರೈತರು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.

ಕೊರೋನಾ ಲಾಕ್ ಡೌನ್ ನಿಂದ ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಸಿಗದೆ, ಕೃಷಿ ಉತ್ಪನ್ನಗಳನ್ನು ಬೀದಿ ಬದಿಗಳಲ್ಲಿ ಸುರಿದು ನಷ್ಟ ಅನುಭವಿಸಿದ್ದಾರೆ. ಈಗ ಕೃಷಿ ಚಟುವಟಿಕೆ ಆರಂಭಿಸಲು ಹಣಕಾಸಿನ ಸಮಸ್ಯೆ ಉಂಟಾಗಿದೆ, ಸಹಕಾರಿ ಸಂಸ್ಥೆಗಳ 22ಲಕ್ಷ ರಾಷ್ಟ್ರೀಕೃತ ಬ್ಯಾಂಕ್ ಗಳ 20ಲಕ್ಷ ರೈತರ ಬಾಕಿ ಸಾಲ ಕಟ್ಟಿದವರಿಗೆ ಮಾತ್ರ ಹೊಸ ಸಾಲ ನೀಡುತ್ತೇವೆ ಎನ್ನುತ್ತಾರೆ. ಇದು ರೈತರಿಗೆ ನುಂಗಲಾರದ ತುತ್ತಾಗಿದೆ, ಹಳೆ ಸಾಲ ಮನ್ನಾ ಮಾಡಿ ಕೂಡಲೇ ಎಲ್ಲ ರೈತರಿಗೆ ಹೊಸ ಸಾಲ ನೀಡುವಂತಾಗಬೇಕು.

ಗ್ರಾಮೀಣ ಪ್ರದೇಶದ ಮಹಿಳಾ ಸ್ವಸಹಾಯ ಸಂಘಗಳು ಖಾಸಗಿ ಫೈನಾನ್ಸ್ ಗಳಿಂದ ಆಂದರೆ  ಧರ್ಮಸ್ಥಳ ಹಣಕಾಸು ಸಂಸ್ಥೆ, ಎಲ್ ಅಂಡ್ ಟಿ, ಸಂಜೀವಿನಿ, ಉಜ್ಜೀವನ, ಬಿಎಸ್‍ಎಸ್, ನಬಾರ್ಡ್, ಸೂರ್ಯೋದಯ, ಆಶೀರ್ವಾದ, ಸ್ಪಂದನ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದಿದ್ದಾರೆ. ಈ ಸಾಲ ಮರುಪಾವತಿಸಲು ವಸೂಲಾತಿಗೆ ಒತ್ತಡ ತರುತ್ತಿದ್ದಾರೆ, ಈಗ ಜೀವನ ನಿರ್ವಹಣೆ ಮಾಡುವುದೇ ಕಷ್ಟವಾಗಿರುವಾಗ ಸಾಲ ವಾಪಸಾತಿ ಕಷ್ಟಕರವಾಗಿದೆ, ಈ ಸಾಲ ವಸೂಲಾತಿಗೆ, 2021ರ ಮಾರ್ಚ್ ತನಕ  ತಡೆಹಾಕಬೇಕು.

ಲಕ್ಷಾಂತರ ಯುವಕರು ನಗರಗಳಿಂದ ಹಳ್ಳಿಗಳಿಗೆ ವಾಪಸ್ ಬಂದಿದ್ದಾರೆ ಅವರಿಗೆ ಉದ್ಯೋಗ ಕಲ್ಪಿಸಲು ಎನ್ ಆರ್ ಇ ಜಿ ಯೋಜನೆಯನ್ನು ಕೃಷಿಗೂ ವಿಸ್ತರಿಸಬೇಕು, ಈ ಮೂಲಕ ಕೂಲಿ ಕಾರ್ಮಿಕರ ರಕ್ಷಣೆಗೆ ಒತ್ತು ನೀಡಬೇಕು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗಾಗಿ ಪತ್ರಿಭಟನೆ ಹಮ್ಮಿಕೊಂಡಿರುವುದಾಗಿ ರೈತ ಮುಖಂಡರು ಹೇಳಿದ್ದಾರೆ.

ಪ್ರತಿಭಟನಾ ದಿನದಂದು  ಬೆಳಗ್ಗೆ 11 ಗಂಟೆಗೆ ಮೈಸೂರಿನ ಗನ್ ಹೌಸ್ ಬಳಿ ಇರುವ ಕುವೆಂಪು ಪಾರ್ಕ್ ಬಳಿ ಸಾವಿರಾರು ಸಂಖ್ಯೆಯಲ್ಲಿ ರೈತರು ಆಗಮಿಸಲಿದ್ದು ಅಲ್ಲಿಂದ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ.

Desk

Recent Posts

ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ಇನ್ನಿಲ್ಲ

ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ಅವರು 69ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ.

1 min ago

ರಜನಿಕಾಂತ್‌ ಸಿನಿಮಾ ತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ

ಸೂಪರ್‌ಸ್ಟಾರ್ ರಜನಿಕಾಂತ್ 171ನೇ ಸಿನಿಮಾ 'ಕೂಲಿ' ಟೈಟಲ್ ಟೀಸರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಇದೀಗ ʻಕೂಲಿʼ ತಂಡಕ್ಕೆ ಸಂಗೀತ ನಿರ್ದೇಶಕ…

6 mins ago

ಚಲಿಸುತ್ತಿದ್ದ ಬಸ್‌ನಿಂದ ಕಳಚಿಕೊಂಡ ಚಕ್ರಗಳು: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಸಾರಿಗೆ ಬಸ್‌ನ ಚಕ್ರ ಕಳಚಿಕೊಂಡು ಬಸ್‌ನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಬೆಚ್ಚಿಬಿದ್ದಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ…

28 mins ago

ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ಹಣ ಕಳ್ಳತನ: ಆರೋಪಿ ವಶಕ್ಕೆ

ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ಹಣ ಕಳ್ಳತನವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಅಡೋಲು ಪಟ್ಟಣದ ಟೂಟೌನ್ ಪೊಲೀಸ್ ಠಾಣಾ…

52 mins ago

ಕುಕ್ಕೆ ದೇವಳಕ್ಕೆ ಯೇಸುರಾಜ್ ನೂತನ ಎಇಒ; ಶರಣ್ ಪಂಪ್ವೆಲ್ ಅಪಸ್ವರ, ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಎಸ್ .ಜೆ ಯೇಸುರಾಜ್ ಎ.30 ರಂದು ಅಧಿಕಾರ ಸ್ವೀಕರಿಸಿದರು. ರಾಮನಗರ…

56 mins ago

ಕಾಂಗ್ರೆಸ್ ನಾಯಕ ಎಂ.ಸಿ ವೇಣುಗೋಪಾಲ್ ಮನೆ ಮೇಲೆ ಐಟಿ ದಾಳಿ

ಕಾಂಗ್ರೆಸ್ ನಾಯಕರೂ ಆಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ ವೇಣುಗೋಪಾಲ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ…

1 hour ago