News Karnataka Kannada
Sunday, May 12 2024
ಮೈಸೂರು

ಟಿಪ್ಪು ವಿಚಾರದಲ್ಲಿ ಮುಸಲ್ಮಾನರಲ್ಲಿ ದ್ವೇಷ: ತನ್ವೀರ್ ಸೇಠ್

Photo Credit :

ಟಿಪ್ಪು ವಿಚಾರದಲ್ಲಿ ಮುಸಲ್ಮಾನರಲ್ಲಿ ದ್ವೇಷ: ತನ್ವೀರ್ ಸೇಠ್

ಮೈಸೂರು: ಟಿಪ್ಪುವಿನ ವಿಚಾರಕ್ಕೆ ಸಂಬಂಧಿಸಿದಂತೆ ಮುಸಲ್ಮಾನರನ್ನು ದ್ವೇಷ ಮಾಡಲಾಗುತ್ತಿದೆ. ನಾವು ಮಾಡುವ ಊಟ, ಬಟ್ಟೆಯನ್ನೂ ಟೀಕಿಸುತಿದ್ದಾರೆ. ನಿಮಗೆ ತಾಕತ್ತಿದ್ದರೆ ಸರಾಯಿ, ಜೂಜಾಟ ನಿಷೇಧ ಮಾಡಿ ಎಂದು ಮಾಜಿ ಸಚಿವ, ಶಾಸಕ ತನ್ವೀರ್ ಸೇಠ್ ಸರ್ಕಾರಕ್ಕೆ ಸವಾಲು ಹಾಕಿದರು.

ಮೈಸೂರಿನ ಬನ್ನಿ ಮಂಟಪದ ಸಮುದಾಯ ಭವನದಲ್ಲಿಂದು ಟಿಪ್ಪು ಜಯಂತಿ ಆಚರಣೆಯನ್ನು ಸರಳವಾಗಿ ಮಾಡಲಾಯಿತು. ಕೋವಿಡ್ ಹಿನ್ನೆಲೆಯಲ್ಲಿ ಮಾಜಿ ಸಚಿವ ತನ್ವೀರ್ ಸೇಠ್ ನೇತೃತ್ವದಲ್ಲಿ ಸರಳವಾಗಿ ಟಿಪ್ಪು ಜಯಂತಿ ಕಾರ್ಯಕ್ರಮ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ತನ್ವೀರ್ ಸೇಠ್, ಟಿಪ್ಪು ಜಯಂತಿ ವಿಚಾರದಲ್ಲಿ ರಾಜಕಾರಣ ಮಾಡಬಾರದು, ಟಿಪ್ಪು ವಿಚಾರದಲ್ಲಿ ಇತಿಹಾಸಕಾರರು ಸತ್ಯವನ್ನು ತಿರುಚುವ ಕೆಲಸ ಮಾಡಿದ್ದಾರೆ. ಇತಿಹಾಸ ತಿರುಚುವವರಿಗೆ ನಾವು ಗೌರವ ಕೊಡುವ ಅಗತ್ಯ ಇಲ್ಲ. ನೂರಾರು ವರ್ಷದಿಂದ ಟಿಪ್ಪು ಅಭಿಮಾನಿಗಳು ಟಿಪ್ಪು ಜಯಂತಿ ಆಚರಿಸಿಕೊಂಡು ಬಂದಿದ್ದಾರೆ. ಆದರೆ ಅವರ ಭಾವನೆಗಳಿಗೆ ನೋವುಂಟು ಮಾಡುವ ಕೆಲಸ ಮಾಡಬಾರದು ಎಂದರು.

ಸರ್ಕಾರ ಜನಪರ ಕೆಲಸ ಮಾಡದೇ ಟಿಪ್ಪು ಜಯಂತಿ ವಿಚಾರದಲ್ಲಿ ರಾಜಕಾರಣ ಮಾಡುತ್ತಿದೆ. ಸರ್ಕಾರಕ್ಕೆ ನಾಚಿಕೆ ಆಗಬೇಕು ಎಂದು ಇದೇ ವೇಳೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು