News Karnataka Kannada
Thursday, May 09 2024
ಮೈಸೂರು

ಡಿಸಿ ಕಚೇರಿಗೆ ನುಗ್ಗಲು ಯತ್ನ ಪೊಲೀಸರೊಂದಿಗೆ ಪ್ರತಿಭಟನಾಕಾರರ ಮಾತಿನ ಚಕಮಕಿ

Protest Mysore 3 8 21
Photo Credit :

ಮೈಸೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೋವಿಡ್ ಸಾಂಕ್ರಾಮಿಕ ರೋಗಾವಧಿಯ ವಿಶೇಷ ಪ್ರೋತ್ಸಾಹಾಂಕ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುವ ವೇಳೆ ಪ್ರತಿಭಟನಾಕಾರರು ಕಚೇರಿಯೊಳಗೆ ನುಗ್ಗುವ ಯತ್ನ ನಡೆಸಿ, ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿ ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾದ ಘಟನೆ ನಡೆದಿದೆ.
ದಸಂಸ ಒಕ್ಕೂಟ ಮತ್ತು ರಾಜ್ಯ ರೈತ ಸಂಘದ ವತಿಯಿಂದ ಮಂಗಳವಾರ ಬೆಳಿಗ್ಗೆ ಡಿಸಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಆ ಸಮಯದಲ್ಲಿ ತಮ್ಮ ಮನವಿ ಪಡೆಯಲು ಜಿಲ್ಲಾಧಿಕಾರಿ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರುರು ಸ್ವತಃ ಡಿಸಿ ಅವರೇ ಬರಬೇಕೆಂದು ಪಟ್ಟು ಹಿಡಿದು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು. ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ‘ನಮ್ಮನ್ನು ಡಿಸಿ ಬಳಿ ಹೋಗಲು ಪೊಲೀಸರು ಬಿಡುತ್ತಿಲ್ಲ’ ಎನ್ನುತ್ತಾ ಖಾಕಿ ಕಾವಲು ದಾಟಿ ಗೇಟ್ ಹಾರಿ ಒಳಹೋಗಲು ಪ್ರಯತ್ನಿಸಿದ ಘಟನೆಯೂ ನಡೆಯಿತು. ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು ಎನ್ನಲಾಗಿದೆ.
ನಂತರ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಪರ ಜಿಲ್ಲಾಧಿಕಾರಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿದ ನಂತರ ಪರಿಸ್ಥಿತಿ ಶಾಂತವಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು