ಮೈಸೂರು: ಜಿಲ್ಲೆಯ ತಿ.ನರಸೀಪುರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಉಸ್ತುವಾರಿ ಮೈಸೂರಿನ ಕೆ.ಆರ್.ಕ್ಷೇತ್ರದ ಶಾಸಕರಾದ ಮಾಜಿ ಸಚಿವ ಎಸ್.ಎ.ರಾಮದಾಸ್ ಅವರನ್ನು ನೇಮಕ ಮಾಡಲಾಗಿದೆ.
ಮುಂದಿನ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಗೆಲ್ಲಿಸುವ ದೃಷ್ಠಿಯಲ್ಲಿ ಕ್ಷೇತ್ರದಲ್ಲಿ ಸಂಘಟನಾತ್ಮಕವಾಗಿ ಬಲಪಡಿಸಲು ಶಾಸಕ ಎಸ್.ಎ.ರಾಮದಾಸ್ರನ್ನು ಉಸ್ತುವಾರಿಯಾಗಿ ನೇಮಕ ಮಾಡಲಾಗಿದ್ದು, ಸಂಘಟನೆಯ ವಿಷಯಕ್ಕೆ ಸಂಬoಧಿಸಿದoತೆ ಮೊದಲನೆಯ ಸಭೆಯನ್ನು ಮೈಸೂರಿನ ವಿದ್ಯಾರಣ್ಯಪುರಂನಲ್ಲಿರುವ ಶಾಸಕರ ಕಛೇರಿಯಲ್ಲಿ ನಡೆಸಲಾಯಿತು.
ಸಭೆಯಲ್ಲಿ ಉಪಸ್ಥಿತರಿದ್ದ ಟಿ.ನರಸೀಪುರ ವಿಧಾನ ಮಂಡಲದ ಬಿಜೆಪಿ ಪದಾಧಿಕಾರಿಗಳ ಅಭಿಪ್ರಾಯಗಳನ್ನು ಆಲಿಸಿದ ಶಾಸಕರು ಮಾತನಾಡಿ, ಟಿ.ನರಸೀಪುರ ಮಂಡಲದ ಭಾರತೀಯ ಜನತ ಪಾರ್ಟಿಯ ಸಂಘಟನೆಯ ಜವಬ್ದಾರಿಯನ್ನು ನನಗೆ ಸಂಘಟನೆಯಿAದ ನೀಡಿದ್ದು, ಇನ್ನು ಮುಂದೆ ಬೂತ್ ಮಟ್ಟದಿಂದ ಕಾರ್ಯಕರ್ತರನ್ನು ಬಲಪಡಿಸಿ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪುವಂತೆ ಮಾಡಬೇಕು ಎಂದು ತಿಳಿಸಿದರು.
ರಾಜ್ಯ ಸಂಘಟನೆಯು ಒಂದು ಕ್ಷೇತ್ರದ ಜವಬ್ದಾರಿ ತೆಗೆದುಕೊಳ್ಳಬೇಕೆಂದು ತಿಳಿಸಿದಾಗ, ನನಗೆ ಯಾವ ಕ್ಷೇತ್ರ ಬೇಕೋ ಆ ಕ್ಷೇತ್ರದ ಆಯ್ಕೆಯನ್ನು ಮಾಡಲು ತಿಳಿಸಿತು. ಆದರೆ ನಾನು ಯಾವ ಕ್ಷೇತ್ರ ಕಷ್ಟಕರವಾಗಿದೆ, ಆ ಕ್ಷೇತ್ರವನ್ನೆ ನನಗೆ ಜವಬ್ದಾರಿ ನೀಡಲು ಕೋರಿದೆ. ನಂತರ ಟಿ.ನರಸೀಪುರದ ಜವಾಬ್ದಾರಿಯನ್ನು ನೀಡಿದ್ದಾರೆರೆ. ಪ್ರತಿಯೊಬ್ಬರು ಟಿ.ನರಸೀಪುರ ಕ್ಷೇತ್ರವನ್ನು ಬಿಜೆಪಿ ಕ್ಷೇತ್ರವನ್ನಾಗಿಸಲು ದುಡಿಯಬೇಕೆಂದು ಕರೆ ನೀಡಿದರು.
ಸಭೆಯಲ್ಲಿ ಮಾಜಿ ಶಾಸಕ ಭಾರತೀ ಶಂಕರ್, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ಮಾಜಿ ಪರಿಷತ್ ಸದಸ್ಯ ಸಿ ರಮೇಶ್, ಮೈಸೂರು ವಿಭಾಗ ಪ್ರಭಾರಿ ಮೈ.ವಿ.ರವಿಶಂಕರ್ ಉಪಸ್ಥಿತರಿದ್ದರು.