News Karnataka Kannada
Friday, May 10 2024
ಮೈಸೂರು

ದಶಕಗಳ ಬಳಿಕ ಭರ್ತಿಯಾದ ಅಮಾನಿಬೈರಸಾಗರ ಕೆರೆ

Photo Credit :

ದಶಕಗಳ ಬಳಿಕ ಭರ್ತಿಯಾದ ಅಮಾನಿಬೈರಸಾಗರ ಕೆರೆ

ಗುಡಿಬಂಡೆ: ಎಡೆಬಿಡದೆ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಗುಡಿಬಂಡೆ ಅಮಾನಿಬೈರಸಾಗರ ಕೆರೆ ತುಂಬಿ ಕೋಡಿ ಹರಿಯುತ್ತಿದ್ದು, ಇದನ್ನು ವೀಕ್ಷಿಸಲು ಜನ ಸಾಗರವೇ ಹರಿದು ಬರುತ್ತಿದೆ.

ಕಳೆದ ಹತ್ತು ವರ್ಷಗಳಿಂದ ತಾಲೂಕಿನಾದ್ಯಂತ ಬರಗಾಲ ಆವರಿಸಿದ್ದು, ಕುಡಿಯಲು ನೀರಿಲ್ಲದೆ, ಜನ ಜಾನುವಾರಗಳು ಕಂಗಾಲಾಗಿದ್ದವು. ಆದರೆ ಇದೀಗ ಕಳೆದ 10 ದಿನಗಳಿಂದ ಸುರಿಯುತ್ತಿರುವ ಮಳೆಗೆ ಅಮಾನಿಬೈರಸಾಗರ ಕರೆ ತುಂಬಿ ಕೋಡಿ ಹರಿದಿದ್ದು, ಝರಿಯಂತೆ ಧುಮುಕುತ್ತಿರುವ ಸುಂದರ ದೃಶ್ಯವನ್ನು ವೀಕ್ಷಿಸಲು ಎಲ್ಲೆಡೆಯಿಂದ ಜನ  ಹರಿದು ಬರುತಿದ್ದು ಜನ ನೀರಿನಲ್ಲಿ ಕುಣಿದು ಕುಪ್ಪಳಿಸಿ ಸಂತಸ ಪಡುತ್ತಿದ್ದಾರೆ.

ಜನ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ವಾಹನ ಸವಾರರು ಪ್ರಯಾಣಿಸಲು ಪರದಾಡುತ್ತಿದ್ದರೆ, ವಾಹನಗಳನ್ನು ಸುಗಮವಾಗಿ ಸಂಚರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು. ಕೆರೆ ಭರ್ತಿಯಾದ ಹಿನ್ನೆಲೆಯಲ್ಲಿ ವಿವಿಧ ಗ್ರಾಮಗಳ ಮಹಿಳೆಯರು ಕೆರೆಗೆ ಪೂಜೆ ಹಾಗೂ ಬಾಗಿನ ಅರ್ಪಿಸಿದ್ದು ಕಂಡು ಬಂತು.   

ಅಮಾನಿಬೈರಸಾಗರ ಕೆರೆಯಲ್ಲಿ ತುಂಬಾ ಹೂಳು ತುಂಬಿದ್ದು, ಈ ಹಿಂದೆ ಆರ್ ಆರ್ ಎಂಬ ಯೋಜನೆಯಲ್ಲಿ ಹೂಳೆತ್ತುವ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಮಾಡಲಾಗಿತ್ತು. ಆದರೆ ಈ ಕಾಮಗಾರಿಗಳು ಕಳಪೆಯಿಂದ ಕೂಡಿದೆ. ಯಾವುದೇ ರೀತಿಯ ಹೂಳೆತ್ತುವ ಕಾಮಗಾರಿ ನಡೆದಿಲ್ಲ. ಕೆರೆಯ ಕಟ್ಟೆಯ ತುಂಬಾ ಗಿಡಗಂಟಿಗಳಿಂದ ಕೂಡಿದೆ. ಆದ್ದರಿಂದ ಕೆರೆಯ ಅಭಿವೃದ್ಧಿ ಕಾಮಗಾರಿಯನ್ನು ಸಂಬಂಧಪಟ್ಟ ಇಲಾಖೆ ಕೈಗೆತ್ತಿಕೊಳ್ಳಬೇಕು, ಇದಕ್ಕೆ ಜನಪ್ರತಿನಿಧಿಗಳ ಶ್ರಮ ಅಗತ್ಯವಾಗಿದೆ ಎಂದು ತಾಲೂಕಿನ ಜನತೆ ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು