ಮೈಸೂರು: ನಿನ್ನೆ ಮಂಗಳೂರಿನಲ್ಲಿ ಕೊಲೆಯಾದ ಯುವಕನ ಮೃತ ದೇಹದ ಫೋಟೋ ನೋಡಿದರೆ ಗೊತ್ತಾಗುತ್ತದೆ ಕೊಲೆಗಡುಕರು ಎಂತಹ ಜಿಹಾದಿಗಳು ಎಂದು ಸಂಸದ ಪ್ರತಾಪ್ ಸಿಂಹ ತಮ್ಮ ಟ್ವೀಟರ್ ನಲ್ಲಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ನಿನ್ನೆ ಮಂಗಳೂರಿನಲ್ಲಿ ಕೊಲೆಯಾದ ಯುವಕ ದೀಪಕ್ ರಾವ್ ಅವರ ಮೃತದೇಹವನ್ನು ನೋಡಿದ್ರೆ ಆತನನ್ನು ಕೊಲೆ ಮಾಡಿರುವರು ಎಂತಹ ಜಿಹಾದಿಗಳು ಎಂದು ತಮ್ಮ ಟ್ವೀಟರ್ ನಲ್ಲಿ ಆಕ್ರೋಶ ವ್ಯಕ್ತ ಪಡಿಸಿದ್ದು, ಈ ಕೊಲೆಯ ತನಿಖೆಯನ್ನು ಎನ್ ಐಎಗೆ ವಹಿಸಬೇಕೆಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಮತ್ತು ಅರುಣ್ ಜೇಟ್ಲಿ ಅವರಿಗೆ ಮನವಿ ಸಲ್ಲಿಸಿದ್ದಾರೆ.