News Karnataka Kannada
Thursday, May 02 2024
ಮೈಸೂರು

‘ನನ್ನ ಉದ್ಯೋಗ-ನನ್ನ ಗ್ರಾಮದಲ್ಲಿ’

Women Empowerment
Photo Credit :

ಹುಣಸೂರು: ಗ್ರಾಮೀಣ ಪ್ರದೇಶದಲ್ಲಿ ಆಧುನಿಕ ತಂತ್ರಜ್ಞಾನ ಸ್ಪರ್ಶದೊಂದಿಗೆ ನಮ್ಮ ಸಂಪ್ರದಾಯದ ಉತ್ಪನ್ನಗಳನ್ನು ಉತ್ಪಾದಿಸಿ, ನಿರುದ್ಯೋಗವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ. ಇದಕ್ಕಾಗಿ ತರಬೇತಿ ಕೇಂದ್ರ ತೆರೆಯಲು ಉದ್ದೇಶಿಸಲಾಗಿದೆ.ಸ್ವಾವಲಂಬಿ ಭಾರತ ನಿರ್ಮಾಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಕೃಷಿ ಉತ್ಪನ್ನ ಉದ್ಯೋಗಾಧಾರಿತ ಕೈಗಾರಿಕೆ ಯೋಜನೆ ಪ್ರೋತ್ಸಾಹಿಸಲು ‘ನನ್ನ ಉದ್ಯೋಗ-ನನ್ನ ಗ್ರಾಮದಲ್ಲಿ’ ಎಂಬ ವಿನೂತನ ಯೋಜನೆಯನ್ನು ಜಾರಿಗೆ ತರಲು ಉದ್ದೇಶಿಸಿದ್ದು, ಸರಕಾರಕ್ಕೆ ನಿಗಮದ ವತಿಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ರಘು ಕೌಟಿಲ್ಯ ತಿಳಿಸಿದರು.

ಇದಕ್ಕಾಗಿ ತರಬೇತಿ ಕೇಂದ್ರ ತೆರೆಯಲು ಉದ್ದೇಶಿಸಲಾಗಿದೆ. ತಾಲೂಕಿಗೆ ಪ್ರತಿ ತಿಂಗಳು ಕನಿಷ್ಠ 250 ಮಂದಿಗೆ ತರಬೇತಿ ನೀಡುವ ಇರಾದೆ ಇದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಪ್ರತಿ ಗ್ರಾ.ಪಂ.ನಲ್ಲಿ ತರಬೇತಿ ಕೇಂದ್ರ: ಗ್ರಾಮೀಣ ಪ್ರದೇಶದ ವಿದ್ಯಾವಂತರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಪ್ರತಿ ಗ್ರಾ.ಪಂ.ನಲ್ಲಿನಿಗಮದ ವತಿಯಿಂದ ತರಬೇತಿ ಕೇಂದ್ರ ತೆರೆಯಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರಿಂದ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ, ಯುವತಿಯರು ನಗರ ಪ್ರದೇಶಗಳಿಗೆ ಗುಳೆ ಹೋಗುವುದು ತಪ್ಪಲಿದೆ ಎಂದರು.

ದೇವರಾಜ ಅರಸರ ಹೆಸರನ್ನು ಶಾಶ್ವತವಾಗಿಸಲು ಹುಣಸೂರು ತಾಲೂಕಿನಲ್ಲಿ ಅಗತ್ಯ ಸ್ಥಳ ದೊರೆತಲ್ಲಿ ಅವರ ಹೆಸರಿನಲ್ಲಿ ತರಬೇತಿ ಕೇಂದ್ರ ಅಥವಾ ಸಣ್ಣ ಕೈಗಾರಿಕೆ ಸ್ಥಾಪನೆಗೆ ಮುಂದಾಗುತ್ತೇನೆ ಎಂದರು.

ತಾವು ತಾಲೂಕಿನ ಕೆಬ್ಬೆಕೊಪ್ಪಲು, ಮರದೂರು ಗ್ರಾಮಗಳಿಗೆ ಭೇಟಿ ಇತ್ತು ಗಂಗಾಕಲ್ಯಾಣ ಯೋಜನೆಯ ಅನುಷ್ಠಾನವನ್ನು ಪರಿಶೀಲಿಸಿದ್ದು, ರೈತರು ಸದುಪಯೋಗ ಪಡಿಸಿಕೊಂಡಿದ್ದಾರೆಂದು ಶ್ಲಾಘಿಸಿದರು. ಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಹಳ್ಳದಕೊಪ್ಪಲು ನಾಗಣ್ಣ, ಮಾಜಿ ಅಧ್ಯಕ್ಷ ಹನಗೋಡು ಮಂಜುನಾಥ್‌ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು