ಮೈಸೂರು : ಕೊರೋನಾ ಮೂರನೇ ಅಲೆ ಭೀತಿ ನಡುವೆ ನಾಡಹಬ್ಬ ಮೈಸೂರು ದಸರಾಗೆ ಬಿರುಸಿನ ತಯಾರಿ ನಡೆಯುತ್ತಿದೆ. ಈ ವೇಳೆ ವಿಶ್ವ ಪ್ರಸಿದ್ಧ ದಸರಾಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಸರ್ಕಾರದ ಹೊಸ ಗೈಡ್ ಲೈನ್ಸ್ :
- ದಸರಾದಲ್ಲಿ ಭಾಗವಹಿಸುವವರಿಗೆ ಮಾಸ್ಕ್, ಸ್ಯಾನಿಟೈಸರ್ ಬಳಸುವುದು ಕಡ್ಡಾಯ.
- ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 100 ಜನರಿಗೆ ಅನುಮತಿ ನೀಡಲಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 500 ಜನರಿಗೆ ಅವಕಾಶ ಇದೆ.
- ಜಂಬೂಸವಾರಿ, ಪಂಜಿನ ಕವಾಯತಿಗೆ 500 ಜನರಿಗೆ ಅನುಮತಿ ನೀಡಲಾಗಿದೆ. ಪೊಲೀಸ್, ಆರೋಗ್ಯ ಇಲಾಖೆ ಸೂಚನೆ ಕಡ್ಡಾಯ ಪಾಲನೆ.
- ಕಾರ್ಯಕ್ರಮದಲ್ಲಿ ಭಾಗವಹಿಸುವ ಕಲಾವಿದರು, ಸಿಬ್ಬಂದಿ ಸೇರಿದಂತೆ ಪ್ರತಿ ವ್ಯಕ್ತಿಗೂ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಹಾಗೂ ಕನಿಷ್ಠ ಒಂದು ಡೋಸ್ ಕೊರೋನಾ ಲಸಿಕೆ ಪಡೆದಿರಬೇಕು.
- ವರ್ಚುವಲ್ ಮೂಲಕ ಜಂಬೂಸವಾರಿ ವೀಕ್ಷಣೆಗೆ ಅವಕಾಶ ನೀಡಲಾಗುವುದು. ಇತರ ಜಿಲ್ಲೆಗಳಲ್ಲೂ ಸರಳವಾಗಿ ದಸರಾ ಆಚರಣೆಗೆ ಅನುಮತಿ ನೀಡಲಾಗಿದ್ದು, 400 ಮಂದಿಗೆ ಮಾತ್ರ ಭಾಗವಹಿಸಬಹುದಾಗಿದೆ.