News Karnataka Kannada
Monday, April 29 2024
ಮೈಸೂರು

ನಾಳೆ ಅರಣ್ಯದತ್ತ ಗಜಪಡೆ ಪಯಣ

Photo Credit :

ನಾಳೆ ಅರಣ್ಯದತ್ತ ಗಜಪಡೆ ಪಯಣ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡು ಯಶಸ್ವಿಯಾಗಿ ಮುಗಿಸಿಕೊಟ್ಟಿರುವ ಗಜಪಡೆಯ ತಂಡವು ಬುಧವಾರ ಅರಣ್ಯದತ್ತ ತೆರಳಲಿವೆ.

ನಾಳೆ ಕಾಡಿಗೆ ಹೋಗುವ ಹಿನ್ನೆಲೆಯಲ್ಲಿ ಅರಮನೆಯಲ್ಲಿ ಇಂದು ಅಭಿಮನ್ಯು ನೇತೃತ್ವದ ಗಜಪಡೆಗೆ ಉಸ್ತುವಾರಿ ಸಚಿವ ಎಸ್‌ ಟಿ ಸೋಮಶೇಖರ್‌ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಅಭಿಮನ್ಯು, ವಿಜಯ, ಕಾವೇರಿ, ಗೋಪಿ ಮತ್ತು ವಿಕ್ರಮ ಆನೆಗಳನ್ನು ಸಾಲಾಗಿ ನಿಲ್ಲಿಸಿ ಅವುಗಳಿಗೆ ಭತ್ತ ಮತ್ತು ಕಬ್ಬು ನೀಡಿದರು. ದಸರಾವನ್ನು ಯಶಸ್ವಿಗೊಳಿಸಿದ್ದಕ್ಕೆ ಸಚಿವರು ಕೊಟ್ಟ ಭಕ್ಷಿಸ್ ಇದಾಗಿತ್ತು.

ಇದೇ ವೇಳೆ ಮಾವುತರು ಮತ್ತು ಕಾವಾಡಿಗಳಿಗೆ ಸಚಿವರು ಗೌರವ ಧನ ವಿತರಣೆ ಮಾಡಿದರು.

ಜಂಬೂ ಸವಾರಿಯಲ್ಲಿ ಅಭಿಮನ್ಯುವಿನ ಯಶಸ್ಸಿನ ಬಗ್ಗೆ ಮಾವುತ ವಸಂತ ಫುಲ್ ಖುಷ್ ಆಗಿದ್ದಾನೆ. ಇದೇ ಮೊದಲ ಬಾರಿಗೆ ಚಿನ್ನದ ಅಂಬಾರಿ ಹೊರುವ ಜವಾಬ್ದಾರಿ ಕೊಟ್ಟ ಸಮಯದಲ್ಲಿ ಸ್ವಲ್ಪ ಹೆದರಿಕೆ ಇತ್ತು. ಆದರೆ ಹಿರಿಯ ಅಧಿಕಾರಿಗಳು ನನ್ನನ್ನು ಉತ್ತೇಜಿಸಿದರು ವಸಂತ ಹೇಳಿದ್ದಾನೆ.

ಕಳೆದ ಹಲವು ದಸರಾ ಸಮಯದಲ್ಲಿ ಅಭಿಮನ್ಯು ಮರದ ಅಂಬಾರಿ ಹೊತ್ತಿದ್ದನು. ಅಲ್ಲದೆ ಶ್ರೀರಂಗಪಟ್ಟಣದಲ್ಲಿ ನಡೆದ ದಸರಾದಲ್ಲಿ ಪುಷ್ಪಾರ್ಚನೆಯಲ್ಲಿ ಭಾಗಿಯಾಗಿದ್ದನು. ಈ ಹಿಂದೆ ಮರದ ಅಂಬಾರಿ ಹೊತ್ತ ಅನುಭವ ಇದ್ದ ಕಾರಣ ಚಿನ್ನದ ಅಂಬಾರಿಯನ್ನು ಹೊತ್ತು ಸಕ್ಸಸ್ ಆಗುತ್ತಾನೆ ಅಂತ ಗೊತ್ತಿತ್ತು. ಈಗ ಅಭಿಮನ್ಯು ತನಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದಾನೆ. ಇದರಿಂದ ನನಗೆ ಸಂತೋಷವಾಗಿದೆ ಎಂದು ವಸಂತ ಸಂತಸ ವ್ಯಕ್ತಪಡಿಸಿದ್ದಾನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು