ಮೈಸೂರು: ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವ ವೈದ್ಯರೊಬ್ಬರು ಸ್ಥಳದಲ್ಲೇ ಮೃತಪಟಿರುವ ಘಟನೆ ನಗರದ ಹುಣಸೂರು ರಸ್ತೆಯ ಕಲಾಮಂದಿರದ ಜಲದರ್ಶಿನಿ ಬಳಿ ಭಾನುವಾರ ರಾತ್ರಿ ನಡೆದಿದೆ.
ವೇಗವಾಗಿ ಕಾರು ಚಲಾವಣೆ ಮಾಡಿ ಮೃತಪಟ್ಟ ವೈದ್ಯ ಡಾ.ದರ್ಶನ್(35). ಕುವೆಂಪುನಗರದಲ್ಲಿರುವ ಪ್ರೇರಣಾ ಆಸ್ಪತ್ರೆಯ ಮಾಲೀಕರಾದ ಇವರು ಕೆಲಸ ಮುಗಿಸಿಕೊಂಡು ವಿಜಯನಗರದಲ್ಲಿರುವ ನಿವಾಸಕ್ಕೆ ಮಳೆಯ ನಡುವೆ ವೇಗವಾಗಿ ತಮ್ಮ ಕಾರಿನಲ್ಲಿ ತೆರಳುತ್ತಿದ್ದಾಗ ಕಲಾಮಂದಿರದ ಜಲದರ್ಶಿನಿ ಬಳಿ ಇರುವ ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದ್ದು ದರ್ಶನ್ ಅವರ ತಲೆಯ ಭಾಗಕ್ಕೆ ತೀವ್ರವಾದ ಪೆಟ್ಟಾದ ಕಾರಣ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಸಂಬಂಧ ವಿವಿಪುರಂ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.