News Karnataka Kannada
Sunday, April 28 2024
ಮೈಸೂರು

ನಿಸರ್ಗ ಸುಂದರ ಕರಿವರದ ರಾಜಸ್ವಾಮಿ ಬೆಟ್ಟ

Untitled 1
Photo Credit : News Kannada

ಮೈಸೂರು : ಮಳೆ ಸುರಿದಿದೆ ಭೂಮಿ ತಂಪಾಗಿ, ನಿಸರ್ಗ ಹಸಿರಾಗಿ ತಳತಳಿಸುತ್ತಿದೆ. ಇಂತಹ ಸಂದರ್ಭಗಳಲ್ಲಿ ನಿಸರ್ಗ ನಿರ್ಮಿತ ತಾಣಗಳಿಗೆ ಭೇಟಿ ನೀಡುವುದು ಎಲ್ಲಿಲ್ಲದ ಮಜಾ ಕೊಡುತ್ತದೆ. ಜತೆಗೆ ಬೇಸಿಗೆ ಕಾಲವಾಗಿರುವುದರಿಂದ ಹೆಚ್ಚಿನವರು ಪ್ರವಾಸ ತೆರಳಿ ಒಂದಷ್ಟು ಪ್ರವಾಸಿ ತಾಣಗಳನ್ನು ನೋಡಿಕೊಂಡು ಬರುವ ಪ್ರಯತ್ನ ಮಾಡುತ್ತಾರೆ.

ಒಂದು ವೇಳೆ ಚಾಮರಾಜನಗರದತ್ತ ಪ್ರವಾಸ ತೆರಳಿದ್ದೇ ಆದರೆ ಒಂದಷ್ಟು ಹೊತ್ತು ಬಿಡುವು ಮಾಡಿಕೊಂಡು  ಕರಿವರದರಾಜಸ್ವಾಮಿಬೆಟ್ಟ ಭೇಟಿ ನೀಡುವ ಪ್ರಯತ್ನ ಮಾಡಬಹುದು. ಸಾಮಾನ್ಯವಾಗಿ ನಮ್ಮೆಲ್ಲ ಮಾನಸಿಕ ವೇದನೆಯನ್ನು ದೂರಗೊಳಿಸುವ ಅದ್ಭುತ ಶಕ್ತಿಯಿರುವುದು ಪ್ರಕೃತಿಗೆ ಮಾತ್ರ ಎಂಬುವುದನ್ನು  ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸದಾ ಪೇಟೆಪಟ್ಟಣ, ಕೆಲಸ, ಕಾರ್ಯ ಎನ್ನುತ್ತಾ ಒತ್ತಡದಲ್ಲೇ ಬದುಕನ್ನು ಸಾಗಿಸುವವರು ಒಂದಷ್ಟು ಸಮಯವನ್ನು ಯಾವುದಾದರೂ ಸುಂದರ ರಮಣೀಯ ಸ್ಥಳದಲ್ಲಿ ಕಳೆದು ಬಂದರೆ ಮನಸ್ಸು ಹಗುರವಾಗುತ್ತದೆ.

ದೇವರ ಸೃಷ್ಠಿಯೋ? ಪ್ರಕೃತಿಯ ವರದಾನವೋ ಒಂದಲ್ಲ ಒಂದು ರೀತಿಯಲ್ಲಿ ಸುಂದರ ಪ್ರಕೃತಿಯ ರಮಣೀಯ ತಾಣಗಳು ಅಲ್ಲಲ್ಲಿ ಕಾಣಸಿಗುತ್ತವೆ. ಅವು ಐತಿಹಾಸಿಕ ಮತ್ತು ಪೌರಾಣಿಕವಾಗಿಯೂ ಗಮನಸೆಳೆಯುತ್ತವೆ. ಅವುಗಳಲ್ಲಿ  ಚಾಮರಾಜನಗರದ ಹೊರವಲಯದಲ್ಲಿರುವ  ಐತಿಹಾಸಿಕ ಕರಿವರದರಾಜಸ್ವಾಮಿಬೆಟ್ಟವೂ ಒಂದಾಗಿದೆ ಎಂದರೆ ತಪ್ಪಾಗಲಾರದು.

ನಗರದ ಮತ್ತು ಸುತ್ತಮುತ್ತಲಿನ ನಿಸರ್ಗಪ್ರೇಮಿಗಳಿಗೆ ಇದೊಂದು ವರದಾನ ಎಂದರೂ ತಪ್ಪಾಗಲಾರದು. ಒಂದಷ್ಟು ಸಮಯಗಳನ್ನು ಪ್ರಕೃತಿಯ ನಡುವೆ ಕಳೆದುಹೋಗಲು ಸ್ಥಳೀಯರು ಸೇರಿದಂತೆ ಪ್ರವಾಸಿಗರು ಆಗಾಗ್ಗೆ ಭೇಟಿ ನೀಡುತ್ತಲೇ  ಇರುತ್ತಾರೆ.

ಪ್ರವಾಸಿಗರ ಅನುಕೂಲಕ್ಕಾಗಿ ಕೆಲವರ್ಷಗಳ ಹಿಂದೆ ಇಲ್ಲಿ ಒಂದಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಪ್ರವಾಸಿಗರಿಗೆ ಕುಳಿತು ಅನುಕೂಲವಾಗಲೆಂದು ವೀಕ್ಷಣಾ ಗೋಪುರ ನಿರ್ಮಿಸಲಾಗಿದೆ. ಇಲ್ಲಿರುವ ನೆಲಬಾವಿಗೆ ಸುರಕ್ಷತೆಯ ದೃಷ್ಠಿಯಿಂದ ಕಬ್ಬಿಣದ ಗ್ರಿಲ್‌ಗಳನ್ನು ಅಳವಡಿಸಲಾಗಿದೆ.

ಕರಿವರದರಾಜಬೆಟ್ಟವು ಚಾಮರಾಜನಗರದಿಂದ ಕೇವಲ ನಾಲ್ಕು ಕಿಲೋಮೀಟರ್ ದೂರದಲ್ಲಿದ್ದು, ಸಮುದ್ರಮಟ್ಟದಿಂದ ೪೮೦ ಅಡಿ ಎತ್ತರದಲ್ಲಿದೆ. ಈ ಬೆಟ್ಟವನ್ನು ಹಿಂದಿನ ಕಾಲದಲ್ಲಿ ವೃದ್ಧಾಚಲ ಪರ್ವತಸ್ತೋಮ ಎಂದೇ ಕರೆಯಲಾಗುತ್ತಿತ್ತಂತೆ. ಕಲ್ಲುಬಂಡೆಗಳ ಪರ್ವತ ಹೊಂದಿರುವ ಇಲ್ಲಿಂದ ನಿಂತು ಇಣುಕಿದರೆ ಸುಂದರ ನಿಸರ್ಗ ರಮಣೀಯ ನೋಟ ಲಭ್ಯವಾಗುತ್ತದೆ.

ಈ ಬೆಟ್ಟದಲ್ಲಿ ಹೊಯ್ಸಳರ ಕಾಲದು ಎನ್ನಲಾದ ಸಂಜೀವಿನಿ ಆಂಜನೇಯಗುಡಿಯಿದ್ದು, ಈ ಗುಡಿಯಲ್ಲಿ ಸುಮಾರು ಎರಡೂವರೆ ಅಡಿ ಎತ್ತರದ ಕರಿವರದರಾಜ ವೆಂಕಟರಮಣಸ್ವಾಮಿಯ ಸುಂದರ ಮೂರ್ತಿಯೂ ಇದೆ. ಈ ದೇವಸ್ಥಾನಕ್ಕೆ ಸುಮಾರು ಮೂರು ಶತಮಾನಗಳ ಇತಿಹಾಸವಿದ್ದು ಕ್ರಿ.ಶ. 1688ರಲ್ಲಿ ನಿರ್ಮಾಣ ಮಾಡಿರಬಹುದೆಂದು ಹೇಳಲಾಗುತ್ತಿದೆ.

ಮೈಸೂರು ಒಡೆಯರ್ ಕಾಲದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಈ ಬೆಟ್ಟಕ್ಕೆ ಭೇಟಿ ನೀಡಿದ್ದರು ಅಲ್ಲದೆ ದೇವಸ್ಥಾನಕ್ಕೆ ಕಚ್ಚಾ ರಸ್ತೆ ಹಾಗೂ ಮೆಟ್ಟಿಲನ್ನು ನಿರ್ಮಿಸಲು ವ್ಯವಸ್ಥೆ ಮಾಡಿದರು ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು