ಮೈಸೂರು

ಪರ್ಜನ್ಯ ಪೂಜೆ ಬಳಿಕ ಕೆಆರ್‌ಎಸ್‌ನಲ್ಲಿ ಹೆಚ್ಚಾಯಿತು ನೀರಿನ ಸಂಗ್ರಹ

ರಾಜ್ಯದ ಕಾವೇರಿ ಜಲಾನಯನ ಕಣಿವೆ ಪ್ರದೇಶದಲ್ಲಿ ಮಳೆ ಕಡಿಮೆಯಾದ ಕಾರಣ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ಗುರುವಾರ ಕೃಷ್ಣರಾಜಸಾಗರ ಜಲಾಶಯದ ಬಳಿ ಪರ್ಜನ್ಯ ಪೂಜೆ ಮಾಡಿದ ಬಳಿಕ ರಾಜ್ಯದಾದ್ಯಂತ ಮಳೆ ತೀವ್ರಗೊಂಡಿರುವುದಲ್ಲದೆ, ಕೃಷ್ಣರಾಜಸಾಗರ ಜಲಾಶಯಕ್ಕೆ 1.26 ಅಡಿಗೂ ಹೆಚ್ಚು ನೀರು ಸಂಗ್ರಹವಾಗಿದೆ.

ಸಧ್ಯ ಜಲಾಶಯದಲ್ಲಿ 115.96 ಅಡಿ ಸಂಗ್ರಹವಾಗಿದ್ದು, ಕಳೆದ ಬುಧವಾ ಜಲಾಶಯದಲ್ಲಿ 114.70 ಅಡಿ ನೀರು ಸಂಗ್ರವಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಂಪತಿ ಪೂಜೆ ಬಳಿಕ ಕೆ.ಆರ್.ಎಸ್.ಗೆ. ಹರಿದುಬರುತ್ತಿರುವ ಒಳ ಹರಿವಿನ ಪ್ರಮಾಣವೂ ಹೆಚ್ಚಿದೆ.

ಕಳೆದ ಬುಧವಾರ ಜಲಾಶಯಕ್ಕೆ 6170 ಕ್ಯುಸೆಕ್ ನೀರು ಹರಿದುಬರುತ್ತಿದ್ದರೆ, 6345 ಕ್ಯುಸೆಕ್ ನೀರು ಹೊರ ಹರಿವು ದಾಖಲಾಗಿತ್ತು.
ಮುಖ್ಯಮಂತ್ರಿಗಳ ಪೂಜೆ ಬಳಿಕ ಗುರುವಾರ ಜಲಾಶಯಕ್ಕೆ 13,795 ಕ್ಯುಸೆಕ್ ನೀರು ಹರಿದುಬಂದರೆ, 6387 ಕ್ಯುಸೆಕ್ ನೀರನ್ನು ಹೊರಗೆ ಹರಿಸಲಾಗುತ್ತಿತ್ತು. ಜಲಾಶಯದಲ್ಲಿ 115.25 ಅಡಿ ನೀರು ಸಂಗ್ರಹವಾಗಿತ್ತು.

ಶುಕ್ರವಾರ ಜಲಾಶಯಕ್ಕೆ 11893 ಕ್ಯುಸೆಕ್ ಒಳ ಹರಿವು ಇದ್ದರೆ, 6418 ಕ್ಯುಸೆಕ್ ಹೊರಗೆ ಹರಿಸಲಾಗುತ್ತಿತ್ತು. ಅಣೆಕಟ್ಟೆಯಲ್ಲಿ 115.54 ಅಡಿ ನೀರು ಇತ್ತು. ಶನಿವಾರ ಜಲಾಶಯದಲ್ಲಿ 115.62 ಅಡಿಗೆ ಏರಿಕೆಯಾಗಿದ್ದು, 7692 ಕ್ಯುಸೆಕ್ ನೀರು ಹರಿದುಬರುತ್ತಿದ್ದರೆ, 6422 ಕ್ಯುಸೆಕ್ ಹೊರಗೆ ಬಿಡಲಾಗುತ್ತಿತ್ತು.

ಭಾನುವಾರ 115.67 ಅಡಿ ನೀರು ಸಂಗ್ರಹವಾಗಿದ್ದರೆ, ಜಲಾಶಯಕ್ಕೆ 7429 ಕ್ಯುಸೆಕ್ ಒಳಹರಿವು, 6423 ಕ್ಯುಸೆಕ್ ನೀರನ್ನು ಹೊರಗೆ ಹರಿಸಲಾಗುತ್ತಿತ್ತು. ಸೋಮವಾರ ಜಲಾಶಯದಲ್ಲಿ 115.96 ಅಡಿ ನೀರು ಏರಿಕೆಯಾಗಿದ್ದರೆ, 9791 ಕ್ಯುಸೆಕ್ ಒಳ ಹರಿವು ಹಾಗೂ 5343 ಕ್ಯುಸೆಕ್ ನೀರನ್ನು ಹೊರಗೆ ಹರಿಸಲಾಗುತ್ತಿತ್ತು. ಒಟ್ಟಾರೆ ಮುಖ್ಯಮಂತ್ರಿಗಳ ಪೂಜೆ ಬಳಿಕ ಕೃಷ್ಣರಾಜಸಾಗರ ಜಲಾಶಯದಲ್ಲಿ ನೀರಿನ ಸಂಗ್ರಹ ಏರಿಕೆಯಾಗಿರುವುದನ್ನೂ ಸತ್ಯ.

Sneha Gowda

Recent Posts

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

3 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

14 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

50 mins ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

1 hour ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

2 hours ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

2 hours ago