Categories: ಮೈಸೂರು

ಬೆಂಕಿ ನಂದಿಸಲು ಹೋದ ವ್ಯಕ್ತಿ ಬೆಂಕಿಗಾಹುತಿ

ರಾಮನಗರ: ರಾಗಿ ಬಣವೆಗೆ ಬಿದ್ದ ಬೆಂಕಿಯನ್ನು ನಂದಿಸಲು ಹೋದ ವ್ಯಕ್ತಿಯೊಬ್ಬ ಅಗ್ನಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಬಿಡದಿ ಹೋಬಳಿ ಕೋಡಿಯಾಲ ಗ್ರಾಮದಲ್ಲಿ ಬುಧವಾರ ನಡೆದಿದೆ.

ಕೋಡಿಯಾಲ ಗ್ರಾಮದ ರೈತ ಕೆಂಪಯ್ಯ(65) ಮೃತರು. ಇದೇ ಗ್ರಾಮದ ಲಕ್ಷ್ಮಿ ನಾರಾಯಣ ಎಂಬುವರು ಒಂದೂವರೆ ಎಕರೆಯಲ್ಲಿ ರಾಗಿ ಬೆಳೆ ಬೆಳೆದು. ಒಕ್ಕಣೆ ಮಾಡುವ ಸಲುವಾಗಿ ಮೆದೆ ಹಾಕಿದ್ದರು. ಬುಧವಾರ ಮಧ್ಯಾಹ್ನದ ಸಮಯದಲ್ಲಿ  ಲಕ್ಷ್ಮೀನಾರಾಯಣರವರ ಹುಲ್ಲಿನ ಮೆದೆಗೆ ಬೆಂಕಿ ಬಿದ್ದಿತ್ತು. ಇದೇ ಹೊತ್ತಿನಲ್ಲಿ ತೋಟದ ಕಡೆ ತೆರಳುತ್ತಿದ್ದ ಕೆಂಪಯ್ಯ ಮೆದೆಗೆ ಬೆಂಕಿ ಹೊತ್ತಿ ಉರಿಯುತ್ತಿದ್ದದನ್ನು ಕಂಡು ನಂದಿಸಲು ಮುಂದಾಗಿದ್ದಾರೆ.

ಈ ಸಂದರ್ಭದಲ್ಲಿ ಬೆಂಕಿಯ ಜ್ವಾಲೆ ಹಾಗೂ ಹೊಗೆಯ ನಡುವೆ ಸಿಲುಕಿದ ಕೆಂಪಯ್ಯ ಸ್ಥಳದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಎರಡು ರಾಗಿ ಮೆದೆಗಳು ಭಸ್ಮಗೊಂಡಿದ್ದು, ಮೃತ ಕೆಂಪಯ್ಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಯಿತು. ಮರಣೋತ್ತರ ಪರೀಕ್ಷೆ ನಂತರ ಶವವನ್ನು ವಾರಸುದಾರರಿಗೆ ನೀಡಲಾಗಿದೆ.  ಘಟನಾ ಸ್ಥಳಕ್ಕೆ ಪೊಲೀಸ್, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಬಿಡದಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Desk

Recent Posts

ಶಬ್ದ ಮಾಲಿನ್ಯದಿಂದ ನಿದ್ರೆಗೆ ಭಂಗ: ಹೃದಯಾಘಾತದ ಆತಂಕ ಹೆಚ್ಚಳ

ಇಂದು ಶಬ್ದ ಮಾಲಿನ್ಯ ಮಾತ್ರವಲ್ಲದೆ ಪ್ರತಿಯೊಂದು ಮಾಲಿನ್ಯವು ಪರಿಸರದ ಗುಣಮಟ್ಟಕ್ಕೆ ಮಾತ್ರವಲ್ಲದೆ ಮನುಷ್ಯನ ಜೀವನಕ್ಕೂ ಗಂಭೀರ ಅಪಾಯವಾಗಿದೆ. ಶಬ್ದ ಮಾಲಿನ್ಯವು…

12 mins ago

ಮಂಗಳೂರು: ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನ ಸಾಗಾಟ !

ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.…

31 mins ago

ಮತ್ತೊಂದು ದಾಖಲೆ ಬರೆದ ಕೂಲ್‌ ಕ್ಯಾಪ್ಟನ್ ಎಂ.ಎಸ್​. ಧೋನಿ

ಐಪಿಎಲ್ ಇತಿಹಾಸದಲ್ಲಿ ಕೂಲ್‌ ಕ್ಯಾಪ್ಟನ್ ಎಂ.ಎಸ್​. ಧೋನಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಕಳೆದ ದಿನ (ಏ.28) ಚೆನ್ನೈನ ಎಂ.ಎ. ಚಿದಂಬರಂ…

46 mins ago

ಎಷ್ಟು ದಿನ ಮುಸ್ಲಿಮರ ಬಗ್ಗೆ ಭಯ ಹುಟ್ಟಿಸುತ್ತೀರಿ: ಮೋದಿಗೆ ಓವೈಸಿ ಪ್ರಶ್ನೆ

ಮುಸ್ಲಿಮರು ಶೀಘ್ರದಲ್ಲೇ ಬಹುಸಂಖ್ಯಾತರಾಗುತ್ತಾರೆ ಎಂಬ ಭಯವನ್ನು ನರೇಂದ್ರ ಮೋದಿ ಇನ್ನೂ ಹಿಂದೂಗಳಲ್ಲಿ ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಲ್ ಇಂಡಿಯಾಮಜ್ಲಿ ಸ್-ಎ-ಇತ್ತೆಹಾದುಲ್…

1 hour ago

ಛತ್ತೀಸ್‌ಗಢದಲ್ಲಿ ಭೀಕರ ರಸ್ತೆ ಅಪಘಾತ: 9 ಮಂದಿ ದುರ್ಮರಣ, 23 ಮಂದಿಗೆ ಗಾಯ

ಛತ್ತೀಸ್‌ಗಢದ ಬೆಮೆತಾರಾದ ಕಥಿಯಾ ಪೆಟ್ರೋಲ್ ಪಂಪ್ ಬಳಿ ಪಿಕಪ್ ಟ್ರಕ್ ರಸ್ತೆ ಬದಿ ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ…

1 hour ago

ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದ ಮಗು: ವಿಡಿಯೋ ವೈರಲ್‌

ತಮಿಳುನಾಡಿನ ಚೆನ್ನೈನ ಅವಡಿಯ ತಿರುಮಲ್ಲೈವೋವಲ್‌ನಲ್ಲಿರುವ  ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ಏಳು ತಿಂಗಳ ಮಗುವೊಂದು ವಿಂಡೋ ಪೋರ್ಚ್‌  ಮೇಲೆ ಬಿದ್ದ ಘಟನೆ ನಡೆದಿದೆ. 

2 hours ago