ಗುಂಡ್ಲುಪೇಟೆ: ನಿಗದಿತ ಸಮಯಕ್ಕಿಂತಲೂ ಬೇಗನೆ ಬಾಗಿಲು ತೆಗೆದು ಅಬಕಾರಿ ಕಾಯ್ದೆ ಉಲ್ಲಂಘಿಸಿ ವ್ಯಾಪಾರ ಮಾಡುತ್ತಿದ್ದ ತಾಲೂಕಿನ ಬೇಗೂರು ಗ್ರಾಮದ ಮದ್ಯದಂಗಡಿ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬೆಳಗ್ಗೆ 6.30ಕ್ಕೆ ಬಾಗಿಲು ತೆಗೆದು ಮದ್ಯಮಾರಾಟ ಮಾಡುತ್ತಿದ್ದ ಬಗ್ಗೆ ಗ್ರಾಮಸ್ಥರು ಹಾಗೂ ಸಂಘಟನೆಗಳು ಸೇರಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ತೆರಳಿದ ಬೇಗೂರು ಪೊಲೀಸರು ಅಬಕಾರಿ ಇಲಾಖೆಯಿಂದ ಪಡೆದಿರುವ ಪರವಾನಗಿಯನ್ನು ಪರಿಶೀಲಿಸಿದಾಗ ಬೆಳಗ್ಗೆ 10ರಿಂದ ರಾತ್ರಿ 10.30ರವರೆಗೆ ಮಾತ್ರ ಮಾರಾಟ ಮಾಡಲು ಅನುಮತಿ ನೀಡಲಾಗಿದ್ದರೂ ಬೆಳಗ್ಗೆಯೇ ಬಾಗಿಲು ತೆರೆದು ವ್ಯಾಪಾರ ಮಾಡಿ ನಿಯಮ ಉಲ್ಲಂಘನೆ ಮಾಡಿದ್ದ ಹಿನ್ನೆಲೆಯಲ್ಲಿ ನೌಕರರಾದ ಲೋಕೇಶ್ ಮತ್ತು ಮಹೇಶ್ ಎಂಬುವರ ವಿರುದ್ದ ಕಲಂ 36ರ ಅನ್ವಯ ಪ್ರಕರಣ ದಾಖಲಿಸಿದ್ದಾರೆ.